'ಮುಂದಿನ ನವೆಂಬರ್‌ಗೆ ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಚೇಂಜ್': ಆಗ್ತಾರೆ ಮುಂದಿನ ಮುಖ್ಯಮಂತ್ರಿ?

ಮೈಸೂರು, ಜೂನ್‌ 14: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದ್ದು, ಕೈ ಪಾಳಯದಲ್ಲಿ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಸು ನಡೆಯುತ್ತಿರುತ್ತದೆ. ಈಗಾಗಲೇ ಅಧಿಕಾರ ಹಂಚಿಕೆ ಸೂತ್ರದ ವಿಚಾರವಾಗಿ ಡಿ ಕೆ ಶಿವಕುಮಾರ್‌ ಬಣದವರು ಚರ್ಚೆ ನಡೆಸುತ್ತಿದ್ದು, ಸಿದ್ದರಾಮಯ್ಯ ಅವರು ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಡಿ ಕೆ ಶಿವಕುಮಾರ್‌ ಬಣದ ನಾಯಕರು ಹೇಳಿತ್ತಿದ್ರೆ, ಇತ್ತ ಸಿದ್ದರಾಮಯ್ಯ ಅವರ ಬಣದವರು ಸಿದ್ದರಾಮಯ್ಯ ಅವರೇ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ. ಇದರ ನಡುವ ಹಿರಿಯ ನಾಯಕರೊಬ್ಬರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ. ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗುತ್ತಾರೆ, ನವೆಂಬರ್ ನಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತ ಎಂದು ಹೇಳಿದ್ದಾರೆ.ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಬದಲಾವಣೆಯಾಗಲಿದೆ. ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

Siddaramaiah will change next November December Says H Vishwanath

ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಡಿಸೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸ್ತೀರಿ ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ. ಅಲ್ಲದೇ ಮರು ಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೆ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+