ಸಿದ್ದರಾಮಯ್ಯ ಈ ಜನ್ಮದಲ್ಲಿ ಮುಖ್ಯಮಂತ್ರಿ ಆಗಲ್ಲ: ಗೋವಿಂದ ಕಾರಜೋಳ ಕಿಡಿ
ಬಾಗಲಕೋಟೆ, ಮೇ 11: ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯೂ ಬಿಜೆಪಿ ಸರ್ಕಾರ ಸಂಪೂರ್ಣ ಮತಗಳಿಂದ ಅಧಿಕಾರಕ್ಕೆ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ. ಸಿದ್ದರಾಮಯ್ಯ ಸಿಎಂ ಆಗೋದು ಎಲ್ಲಿಂದ ಬಂತು ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು.

ಇನ್ನೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ಬಾರೀ ಕಿಂಗ್ ಮೇಕರ್ ಆಗುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರೀಯೂ ಬಿಜೆಪಿ ಗೆಲುವು ಸಾಧಿಸಲಿದೆ. ಇವತ್ತಿನ ವಾತಾವರಣ ನೋಡಿದರೆ ನಮಗೆ ಸ್ಪಷ್ಟಬಹುಮತ ಬರುತ್ತೆ. 125 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ. ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಮುಧೋಳ ಕ್ಷೇತ್ರದಲ್ಲಿ ನನ್ನ ಗೆಲವು ಖಚಿತ ಎಂಬುವುದರಲ್ಲಿ ಯಾವುದೇ ಸಂಶಯವಿಲ್ಲ. ನಾನು ಮತ್ತೆ ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ. ಮತಕ್ಷೇತ್ರದ ಮತದಾರರ ಋುಣವನ್ನು ತೀರಿಸುತ್ತೇನೆಂದು ಹೇಳಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 130 ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದೆ.

ನಾನು ಮುಧೋಳ ಮತಕ್ಷೇತ್ರದ ಶಾಸಕನಾಗಿ, ವಿವಿಧ ಇಲಾಖೆಗಳ ಸಚಿವನಾಗಿ, ಉಪ ಮುಖ್ಯ ಮಂತ್ರಿಯಾಗಿ ಮುಧೋಳ ತಾಲೂಕನ್ನ ಅಭಿವೃದ್ಧಿಗೊಳಿಸಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿರುವ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ: ಸಿಎಂ ಬೊಮ್ಮಾಯಿ
ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ.
ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications