ʻಸಿದ್ದರಾಮಯ್ಯ ಈ ನಿರ್ಧಾರವೇ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಸಮಸ್ಯೆಗೆ ಕಾರಣʼ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವು ಇದೀಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹೋರಾಟವು ಸಂಘರ್ಷ ಸ್ವರೂಪವನ್ನು ಪಡೆದುಕೊಂಡಿದ್ದು, ಸರ್ಕಾರದ ನಡೆಗೆ ಸಮುದಾಯದಿಂದ, ಸಾರ್ವಜನಿಕ ವಲಯ ಹಾಗೂ ವಿರೋಧ ಪಕ್ಷಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರ ಈ ನಡತೆಯಿಂದಲೇ ಸಮಸ್ಯೆಗಳು ಉಲ್ಬಣಗೊಂಡಿದೆ ಎಂದು ಅವರು ದೂರಿದ್ದಾರೆ.

ಒಂದು ಸರ್ಕಾರಕ್ಕೆ ಈ ರೀತಿಯ ಸವಾಲುಗಳು ಎದುರಾಗುವುದು ಸಹಜ, ಸಮಾಜ ಬದಲಾದಂತೆ ಸಮುದಾಯಗಳ ಆಶೋತ್ತರಗಳು ಬದಲಾಗುತ್ತವೆ. ತಮ್ಮ ಹಕ್ಕುಗಳನ್ನು ಮೀಸಲಾತಿ ಮೂಲಕ ಕೇಳುತ್ತಾರೆ. ಇಪ್ಪತ್ತು ಮೂವತ್ತು ವರ್ಷದಿಂದ ಇದ್ದಂತಹ ಸಾಮಾಜಿಕ ವ್ಯವಸ್ಥೆ ಈಗ ಬದಲಾಗಿದೆ. ಸಾಮಾಜಿಕ, ಆರ್ಥಿಕವಾಗಿ ಸಾಕಷ್ಟು ಬದಲಾಗಿದೆ. ಹೀಗಾಗಿ ಈ ರೀತಿಯ ಬೇಡಿಕೆಗಳು ಹೆಚ್ಚಾಗುತ್ತವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Siddaramaiah s decision is reason for the Panchamasali community s 2A reservation problem

ನಮ್ಮ ಅಧಿಕಾರದ ಅಧಿಯಲ್ಲಿ ಧಾರ್ಮಿಕ ಮೀಸಲಾತಿಯನ್ನು ತೆಗೆದು ಹಾಕಿದ್ದೇವೆ. ಹಿಂದೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ಧಾರ್ಮಿಕ ಮೀಸಲಾತಿ ನೀಡಿರುವುದನ್ನು ತಿರಸ್ಕಾರ ಮಾಡಿವೆ. ಪಶ್ಚಿಮ ಬಂಗಾಳದ ವಿಚಾರದಲ್ಲಿ ಸುಪ್ರೀಂಕೋರ್ಟ್ ಧಾರ್ಮಿಕ ಆಧಾರದಲ್ಲಿ ಮೀಸಲಾತಿ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹೀಗಿರುವಾಗ ಅದನ್ನು ತೆಗೆದು ಬೇಡಿಕೆ ಇರುವ ಸಮುದಾಗಳಿಗೆ ನೀಡಿದ್ದೇವೆ. ಪಂಚಮಸಾಲಿ ಸಮುದಾಯದಲ್ಲಿಯೂ ಬಡವರಿದ್ದಾರೆ. ರೈತಾಪಿ ವರ್ಗದ ಜನರಿದ್ದಾರೆ. ರೈತರು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ. ಒಂದು ಸಾರಿ ಪ್ರವಾಹ, ಮತ್ತೊಂದು ಸಾರಿ ಬರಗಾಲ ಬರುತ್ತದೆ. ಹೀಗಾಗಿ ಅವರ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡುವ ಸಂದರ್ಭದಲ್ಲಿ ಈ ಬೇಡಿಕೆ ಬರುವುದು ಸಹಜ ಎಂದು ಅವರು ಹೇಳಿದ್ದಾರೆ.

ಹೀಗಾಗಿ ನಾವು ಅದನ್ನು 2ಸಿ, ಮತ್ತು 2ಡಿ ಗೆ ವಿಂಗಡಣೆ ಮಾಡಿದ್ದೇವು. ಆದರೆ, ಕಾಂಗ್ರೆಸ್ ಪಕ್ಷದ ಕೆಲವು ಬೆಂಬಲಿಗರು ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಅಲ್ಲಿ ಕೂಡ ನಾವು ಪೂರ್ಣ ಪ್ರಮಾಣದ ವಾದ ಮಾಡಲು ಅವಕಾಶ ಕೇಳಿದ್ದೇವು, ಆಗ ಸುಪ್ರೀಂ ಕೋರ್ಟ್ ಅಲ್ಲಿಯವರೆಗೂ ಯಾವುದೇ ಆದೇಶ ಜಾರಿ ಮಾಡಬೇಡಿ ಅಂತ ಹೇಳಿತು. ನಾವು ಮುಂದಿನ ವಿಚಾರಣೆವರೆಗೂ ಯಾವುದೇ ಆದೇಶ ಜಾರಿ ಮಾಡುವುದಿಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದೇವೆ‌.

ಆಗ ನಾವು ಅಧಿಕಾರದಲ್ಲಿ ಇದ್ದರೂ ಇದೆಲ್ಲ ಚುನಾವಣೆ ನೀತಿ ಸಂಹಿತೆ ಬಂದ ಮೇಲೆ ಆಗಿರುವುದು. 2023 ರ ಜೂನ್ ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೋರ್ಟ್ ಗೆ ಹಾಜರಾಗಿಲ್ಲ. ತಮ್ಮ ವಾದ ಮಂಡಿಸಿಲ್ಲ, ನಮ್ಮ ಆದೇಶಕ್ಕೆ ಬೆಂಬಲ ಕೊಟ್ಟಿಲ್ಲ. ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಈಗಲಾದರೂ ಸಮರ್ಥವಾಗಿ ವಾದ ಮಾಡಿ ನ್ಯಾಯ ಕೊಡಿಸಬೇಕು ಎಂದು ಹೇಳಿದ್ದಾರೆ.

ಒಂದು ಜನಪರವಾಗಿರುವ ಸಾಮಾನ್ಯ ಜ್ಞಾನ ಇರುವ ಸರ್ಕಾರ ಪ್ರಬುದ್ಧತೆಯಿಂದ ತೀರ್ಮಾನ ಮಾಡಬೇಕು. ಏನೇ ಸಮಸ್ಯೆ ಇದ್ದರೂ ಮಾತುಕತೆಯಿಂದ ಸಮಸ್ಯೆ ಬಗೆ ಹರಿಸಬಹುದು ಎನ್ನುವುದನ್ನು ಈ ಸರ್ಕಾರ ಮರೆತಿದೆ. ಲಿಂಗಾಯತ ಪಂಚಮಸಾಲಿ ಸಮಾಜ ಕಳೆದ ಒಂದೂವರೆ ವರ್ಷದಲ್ಲಿ ಮುಖ್ಯಮಂತ್ರಿ ಭೇಟಿಗೆ ಹಲವಾರು ಬಾರಿ ಪ್ರಯತ್ನ ಮಾಡಿದೆ, ಸಮಯ ಕೊಟ್ಟಿಲ್ಲ. ಕೊಟ್ಟ ಸಮಯದಲ್ಲಿಯೂ ಸರಿಯಾಗಿ ಸ್ಪಂದನೆ ಮಾಡಿಲ್ಲ ಎನ್ನುವ ಭಾವನೆ ಅವರ ಮನಸಲ್ಲಿ ಬಂದಿದೆ. ಅದಕ್ಕಾಗಿ ಅವರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆದರೂ ಅವರನ್ನು ಕರೆದು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.

ಯಾರಿಗೂ ತೊಂದರೆ ಆಗದಂತೆ ನಾವು ಮಾಡಿದ ಆದೇಶವನ್ನು ಜಾರಿ ಮಾಡಲು ಇವರಿಗೆ ಏನು ತೊಂದರೆ ಎಂದು ಪ್ರಸ್ನಿಸಿದರು. ಆದರೆ, ಇವರಿಗೆ ಮನಸಿಲ್ಲ, ಹೀಗಾಗಿ ಸ್ವಾಮೀಜಿ ಮೇಲೆ, ಸಮುದಾಯದ ಮೇಲೆ ದ್ವೇಷ ಕಾರುತ್ತಿದ್ದಾರೆ. ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿ, ರಕ್ತ ಸುರಿಸಿದ್ದಾರೆ. ಬಹಳ ದೊಡ್ಡ ಪ್ರಮಾಣದ ನೋವುಗಳಾಗಿವೆ. ಹೀಗಾಗಿ ಸಮುದಾಯ ಆಕ್ರೋಶಗೊಂಡಿದೆ. ಇದು ಪ್ರಜಾಪ್ರಭುತ್ವದ ನಡೆಯಲ್ಲ, ಮುಖ್ಯಮಂತ್ರಿ ಹಾಗೂ ಸಚಿವರು ಸಂವಿಧಾನ ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಾರೆ, ಆದರೆ, ಎಲ್ಲವೂ ಸಂವಿಧಾನ ವಿರೋಧಿ ಕೆಲಸ ಮಾಡುತ್ತಾರೆ.

ಇದು ದಮನಕಾರಿ ನೀತಿಯಾಗಿದ್ದು, ಸರ್ವಾಧಿಕಾರಿ ಸರ್ಕಾರ ಇದಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಲಾಠಿ ಚಾರ್ಜ್ ಮಾಡಿರುವ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು, ಹಾಗೂ ಹೋರಾಟಗಾರರನ್ನು ಕರೆದು ಶಾಂತ ರೀತಿಯಿಂದ ಚರ್ಚಿಸಿ ಪರಿಹಾರ ಕಂಡು ಹಿಡಿಯಬೇಕು ಎಂದು ಹೇಳಿದರು.

ಪಂಚಮಸಾಲಿ ಸಮುದಾಯದ ಸಚಿವರು ಶಾಸಕರ ಜೊತೆ ಚರ್ಚಿಸಿ ಹೋರಾಟಗಾರರ ಜೊತೆಗೆ ಮುಖ್ಯಮಂತ್ರಿಗಳು ನೇರವಾಗಿ ಮಾತನಾಡಿದರೆ ಯಾರೂ ಇಲ್ಲ ಎನ್ನುವುದಿಲ್ಲ. ಎಲ್ಲದಕ್ಕೂ ಮುಖ್ಯಮಂತ್ರಿಗಳು ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಹೀಗಾಗಿ ಅವರ ಈ ನಡತೆಯಿಂದಲೇ ಸಮಸ್ಯೆಗಳು ಉಲ್ಬಣಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+