BJP MLA Munirathna: ಮುನಿರತ್ನ ವಿರುದ್ಧ ಮೂರು ಪ್ರಕರಣ SIT ಗೆ: ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು, ಸೆಪ್ಟೆಂಬರ್ 20: ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು (ಶುಕ್ರವಾರ) ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದರು.
ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದ ಸಿದ್ದರಾಮಯ್ಯ ಅವರು, ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ , ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.
ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿ, ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡಿಲ್ಲ. ಕುಮಾರಸ್ವಾಮಿಯವರು ಎಂದಿಗೂ ಹಿಟ್ ಎಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications