ಶಾಸಕಾಂಗ ಪಕ್ಷದ ನಾಯಕ: ಪರಮೇಶ್ವರ್‌ ಬದಲಿಸಿ ಸಿದ್ದರಾಮಯ್ಯಗೆ ಮಣೆ

ಹೈದಬಾರಾದ್, ಮೇ 18: ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ನಿನ್ನೆಯಷ್ಟೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಶಾಸಕಾಂಗ ಪಕ್ಷದ ನಾಯರನ್ನಾಗಿ ಆರಿಸಲಾಗಿತ್ತು. ಆದರೆ ಇಂದು ಹೈದರಾಬಾದ್‌ನ ಹೊಟೆಲ್‌ನಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಅತ್ಯಂತ ಮಹತ್ವದ ದಿನವಾಗಿದ್ದು, ನಾಳೆ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತ ಸಾಬೀತು ಮಾಡಬೇಕಿದೆ. ಹಾಗಾಗಿ ಹಿರಿಯರು ಅನುಭವಿಗಳಾದ ಹಾಗೂ ಉತ್ತಮ ವಾಕ್ಪಟು, ಹಠಮಾರಿಯೂ ಆಗಿರುವ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದರೆ ಸೂಕ್ತ ಎಂಬ ಅನಿಸಿಕೆಯಿಂದ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆರಿಸಲಾಗಿದೆ.

Siddarmaiah choosen as Legislative party leader

ರಾಜ್ಯಪಾಲರು ಬಿಜೆಪಿಯ ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್‌ ಅನ್ನಾಗಿ ಆಯ್ಕೆ ಮಾಡುತ್ತಿದ್ದಂತೆ ಈ ಬೆಳವಣಿಗೆ ನಡೆದಿದ್ದು, ಸ್ಪೀಕರ್‌ ಮುಖಾಂತರ ನಾಳೆ ಏನಾದರೂ ಪಕ್ಷಪಾತ ನಡೆದಲ್ಲಿ ಅದನ್ನು ಎದುರಿಸಲು ಸಿದ್ದರಾಮಯ್ಯ ಸಮರ್ಥರು ಎಂಬ ಕಾರಣಕ್ಕೆ ಈ ನಿರ್ಣಯವನ್ನು ಕಾಂಗ್ರೆಸ್ ತಳೆದಿದೆ.

ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ನಾಳೆ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರನ್ನು ಮುನ್ನಡೆಸಲಿದ್ದು, ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಅವರೇ ಕೂರಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+