ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರ್ಕಾರದ ಕಿವಿ ಹಿಂಡುವ ಸಮನ್ವಯ ಸಮಿತಿಗೆ ಸಿದ್ದರಾಮಯ್ಯ ನೇತೃತ್ವ
ಬೆಂಗಳೂರು, ಜೂನ್ 01: ಸಮ್ಮಿಶ್ರ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಲು ಸಮನ್ವಯ ಸಮಿತಿ ರಚಿಸಲಾಗಿದ್ದು ಇದರ ಮುಖಂಡತ್ವವನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ನ ಪ್ರಮುಖ ಮುಖಂಡರು ಇರುವ ಈ ಸಮನ್ವಯ ಸಮಿತಿಯು ಸರ್ಕಾರದ ನೀತಿಗಳು, ಪ್ರಮುಖ ನಿರ್ಧಾರಗಳು, ಯೋಜನೆಗಳ ಬಗ್ಗೆ ಚರ್ಚಿಸಿ ಸಲಹೆ, ಸೂಚನೆಗಳನ್ನು ನೀಡಲಿದೆ.
ಪುಟ ವಿಸ್ತರಣೆ: ಯಾವ ಖಾತೆ ಯಾರಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ
ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್ ಸಹ ಈ ಸಮಿತಿಯ ಸದಸ್ಯರಾಗಿದ್ದು, ಸಿದ್ದರಾಮಯ್ಯ ಅವರು ಇದರ ಮುಖ್ಯಸ್ಥರಾಗಿದ್ದಾರೆ. ಜೆಡಿಎಸ್ನ ಡಾನಿಶ್ ಅಲಿ ಸೇರಿದಂತೆ ಕೆಲವು ಮುಖಂಡರುಗಳು ಸಮಿತಿಯಲ್ಲಿದ್ದಾರೆ.
ಸಮಿತಿಯು ಕಡ್ಡಾಯವಾಗಿ ತಿಂಗಳಿಗೊಮ್ಮೆ ಸಭೆ ಸೇರಿ, ಸರ್ಕಾರ ನಡೆಯುತ್ತಿರುವ ಹಾದಿಯ ವಿಮರ್ಶೆ ಮಾಡುತ್ತದೆ ಅಲ್ಲದೆ, ನೀತಿಗಳು, ಯೋಜನೆಗಳು, ಪ್ರಮುಖ ನಿರ್ಧಾರಗಳ ಬಗ್ಗೆ ಚರ್ಚಿಸಿ ಸಲಹೆ ನೀಡಲಿದೆ.
Comments
English summary
Coordination Committee is formed for give advice to the Karnataka Government. Siddarmaiah will be the head of the Coordination Committee.