ದಾವಣಗೆರೆಯಲ್ಲಿ ಪೈಲಟ್ ತರಬೇತಿ ಕೇಂದ್ರ : ಸಿದ್ದೇಶ್ವರ್
ದಾವಣಗೆರೆ, ಜೂನ್ 2 : ದಾವಣಗೆರೆ ಅಥವ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ಆರಂಭಿಸುವ ಕನಸಿದೆ ಎಂದು ವಿಮಾನಯಾನ ಖಾತೆ ರಾಜ್ಯಸಚಿವ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ರಾಜ್ಯ ಸರ್ಕಾರ ಅಗತ್ಯ ಭೂಮಿಯನ್ನು ಒದಗಿಸಿದರೆ, ಕೇಂದ್ರವನ್ನು ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾ ಬಿಜೆಪಿ ಘಟಕ ಸಿದ್ದೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿದ್ದೇಶ್ವರ್, ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಂತರ ಮಾತನಾಡಿದ ಸಿದ್ದೇಶ್ವರ್, ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ಹಾಗೂ ದಾವಣಗೆರೆಯಲ್ಲಿ ಏರ್ಸ್ಟ್ರಿಪ್ ತೆರೆಯುವ ಕನಸಿದೆ. ರಾಜ್ಯ ಸರ್ಕಾರ ಅಗತ್ಯ ಭೂಮಿ ಒದಗಿಸಿದರೆ, ಇವುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರದ ವತಿಯಿಂದ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದರು. ಚಿತ್ರಗಳಲ್ಲಿ ನೋಡಿ ಅಭಿನಂದನಾ ಸಮಾರಂಭ [ಚಿತ್ರಕೃಪೆ : ಸಿದ್ದೇಶ್ವರ್ ಫೇಸ್ ಬುಕ್]

ಜಿ.ಎಂ.ಸಿದ್ದೇಶ್ವರ್ ಅವರಿಗೆ ಅದ್ದೂರಿ ಸ್ವಾಗತ
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಭಾನುವಾರ ದಾವಣಗೆರೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ರಾಜ್ಯ ವಿಮಾನಯಾನ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಬಿಜೆಪಿ ಜಿಲ್ಲಾ ಘಟಕದಿಂದ ಸಿದ್ದೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಪೈಲಟ್ ತರಬೇತಿ ಕೇಂದ್ರ ಸ್ಥಾಪನೆ
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಂ.ಸಿದ್ದೇಶ್ವರ್, ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಪೈಲಟ್ ತರಬೇತಿ ಕೇಂದ್ರ ತೆರೆಯುವ ಕನಸಿದೆ. ಹಾಗೆಯೇ ದಾವಣಗೆರೆಯಲ್ಲಿ ಏರ್ಸ್ಟ್ರಿಪ್ ಸ್ಥಾಪಿಸುವ ಉದ್ದೇಶವಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ
ರಾಜ್ಯ ಸರ್ಕಾರ ಪೈಲಟ್ ತರಬೇತಿ ಕೇಂದ್ರ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಿದರೆ ಕೇಂದ್ರ ಸ್ಥಾಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಸಿದ್ದೇಶ್ವರ್ ಹೇಳಿದರು. ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಭೂಮಿ ಒದಗಿಸಲು ಸೂಚನೆ ನೀಡುತ್ತೇನೆ ಎಂದರು.

ಸೋಮವಾರ ಅಧಿಕಾರ ಸ್ವೀಕಾರ
ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವರಾಗಿ ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಜೂನ್ 2ರ ಸೋಮವಾರ ಸಮಯ ನಿಗದಿಪಡಿಸಿದ್ದು, ಅಧಿಕಾರ ಸ್ವೀಕರಿಸತ್ತೇನೆ. ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿ ನೀಡಿರುವ ಗುರಿ, ಗಡುವಿನಂತೆ ಎಲ್ಲಾ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪಕ್ಷದ ನಾಯಕರಿಗೆ ಬಿಟ್ಟ ವಿಷಯ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಅಥವಾ ಕೇಂದ್ರದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಸಿದ್ದೇಶ್ವರ್ ಹೇಳಿದರು. ರಾಜ್ಯದಲ್ಲಿ ಸ್ಥಾನಮಾನ ಕೊಡುವ ವಿಷಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಟ್ಟದ್ದು, ಪಕ್ಷದ ವರಿಷ್ಠರು ಈ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications