ಕೆಎಸ್ ಭಗವಾನ್ ವಿರುದ್ಧ ಸಹಿ ಸಂಗ್ರಹ ಅಭಿಯಾನ
ಬೆಂಗಳೂರು, ಸೆಪ್ಟೆಂಬರ್. 20: ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್ ಭಗವಾನ್ ಅವರಿಗೆ ಸಾಹಿತ್ಯ ಅಕಾಡೆಮಿ 2013 ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ ಮಾಡಿರುವ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಭಗವಾನ್ ಹೆಸರನ್ನು ಪ್ರಶಸ್ತಿ ಪಟ್ಟಿಯಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನವೂ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಆನ್ ಲೈನ್ ಮೂಲಕ ಸಹಿ ಸಂಗ್ರಹ ಮಾಡಿ ಸಲ್ಲಿಕೆ ಮಾಡಲಾಗುತ್ತದೆ.

ಪತ್ರಕರ್ತ ರೋಹಿತ್ ಚಕ್ರತೀರ್ಥ ಸಹಿ ಸಂಗ್ರಹ ಅಭಿಯಾನದ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಶ್ರೀ ರಾಮನ ಜನ್ಮದ ಬಗ್ಗೆ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.[ಪ್ರಶಸ್ತಿಗೆ ಪಾತ್ರರಾದವರ ಸಾಧನೆಯನ್ನು ಅಕಾಡಮಿ ತಿಳಿಸಲಿ]
ಇದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಅಲ್ಲದೇ ಅಭಿಯಾನದಲ್ಲಿ ಕೆಲವೊಂದು ಬೇಡಿಕೆಯನ್ನು ಇಡಲಾಗಿದ್ದು ಸಾಹಿತ್ಯ ಅಕಾಡೆಮಿಯಿಂದ ಸ್ಪಷ್ಟನೆ ಕೇಳಲಾಗಿದೆ.
* ಪ್ರಶಸ್ತಿ ಆಯ್ಕೆಯಲ್ಲಿ ಪಾಲ್ಗೊಂಡಿದ್ದ ನಿರ್ಣಾಯಕರ ಹೆಸರನ್ನು ಬಹಿರಂಗ ಮಾಡಬೇಕು.
* ಪ್ರಶಸ್ತಿಗೆ ಆಯ್ಕೆಯಾದ ಬರಹಗಾರರ ಸಾಧನೆಯನ್ನು ಜನತೆಗೆ ತಿಳಿಸಬೇಕು
* ಸಾರ್ವಜನಿಕವಾಗಿ ಸದಾ ವಿವಾದಾತ್ಮಕ ಹೇಳಿಕೆ ನೀಡುವ ಭಗವಾನ್ ಅವರಿಗೆ ಪ್ರಶಸ್ತಿ ನೀಡಿದ ಕುರಿತು ಸರ್ಕಾರ ಮತ್ತು ಅಕಾಡೆಮಿ ಉತ್ತರ ನೀಡಬೇಕು.
* ಪ್ರಶಸ್ತಿ ಆಯ್ಕೆ ಸುತ್ತಿನ ಕೊನೆಯಲ್ಲಿ ಯಾವ ಯಾವ ಸಾಹಿತಿಗಳ ಹೆಸರಿತ್ತು ಎಂಬುದನ್ನು ಬಹಿರಂಗ ಮಾಡಬೇಕು.
ಸಹಿ ಸಂಗ್ರಹ ಅಭಿಯಾನವನ್ನು ವೀಕ್ಷಿಸಿ
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications