ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕರ ಸಹಿ ಸಂಗ್ರಹ , ಬಲ ಪ್ರದರ್ಶನಕ್ಕೆ ಜೆಡಿಎಸ್, ಕಾಂಗ್ರೆಸ್ ಸಿದ್ಧತೆ

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 16: ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸಿಗೆ ಸರಕಾರ ರಚನೆ ಮಾಡುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಕರೆ ನೀಡಿಲ್ಲ. ಹೀಗಾಗಿ ಬಲ ಪ್ರದರ್ಶನಕ್ಕೆ ಎರಡೂ ಪಕ್ಷಗಳು ಮುಂದಾಗಿವೆ.

ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಾದ ಎಚ್. ಡಿ. ಕುಮಾರಸ್ವಾಮಿ ಮತ್ತು ಡಾ. ಜಿ. ಪರಮೇಶ್ವರ್ ತಾವು ಹೊಂದಿರುವ ಸಂಖ್ಯಾ ಬಲವನ್ನು ರಾಜ್ಯಪಾಲರ ಮುಂದಿಡಲಿದ್ದಾರೆ. ಇದಕ್ಕಾಗಿ ಎಲ್ಲಾ ಶಾಸಕರ ಸಹಿ ಸಂಗ್ರಹವನ್ನು ಆರಂಭಿಸಿದ್ದು, ಹೆಚ್ಚಿನ ಎಲ್ಲಾ ಶಾಸಕರ ಸಹಿ ಸಂಗ್ರಹಿಸಲಾಗಿದೆ.

Signatures of JDS and Congress MLAs being taken in support of HD Kumaraswamy

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 12 ಶಾಸಕರು ಗೈರುಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 12 ಶಾಸಕರು ಗೈರು

ಇವೆಲ್ಲದರ ನಡುವೆ ನಾಳೆ ಮಧ್ಯಾಹ್ನ 12.20ಕ್ಕೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ರಾಜ್ಯಪಾಲರಿಂದ ಆಹ್ವಾನ ಪಡೆಯಲು ಕಸರತ್ತುಗಳನ್ನು ಮಾಡಲಾಗುತ್ತಿದೆ.

Signatures of JDS and Congress MLAs being taken in support of HD Kumaraswamy

ಬಹುಮತಕ್ಕೆ ಹೊಡೆದಾಟ : ವಾಲಾ ಮುಂದೆ ಪರೇಡ್ ಗೆ ಕಾಂಗ್ರೆಸ್ ಚಿಂತನೆಬಹುಮತಕ್ಕೆ ಹೊಡೆದಾಟ : ವಾಲಾ ಮುಂದೆ ಪರೇಡ್ ಗೆ ಕಾಂಗ್ರೆಸ್ ಚಿಂತನೆ

ಒಂದೊಮ್ಮೆ ಶಾಸಕರ ಸಹಿ ಸಂಗ್ರಹವನ್ನೂ ರಾಜ್ಯಪಾಲರ ಮುಂದಿಟ್ಟಾಗಲೂ ಸರಕಾರ ರಚನೆಗೆ ಆಹ್ವಾನಿಸದೇ ಹೋದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲೂ ಕಾಂಗ್ರೆಸ್ ಚಿಂತನೆ ನಡೆಸಿದೆ.

English summary
Signatures of JDS and Congress MLAs being taken in support of HD Kumaraswamy. The document will be submitted to the Governor later today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X