NREGA: ನರೇಗಾ ಯೋಜನೆಯ ಮಹತ್ವ ಹಾಗೂ ಕರ್ನಾಟಕದ ಸಾಧನೆ ವಿವರಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಫೆಬ್ರವರಿ 05: ಯಾವುದಾದರೂ ಒಂದು ಯೋಜನೆ ಬಹುಮುಖಿಯಾಗಿ ಅಭಿವೃದ್ಧಿಗೆ ಕಾರಣವಾಗಿದೆ ಎಂದರೆ ಅದು ನರೇಗಾ ಯೋಜನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರ ಮಹತ್ವಾಕಾಂಕ್ಷೆಯ ನರೇಗಾ ಯೋಜನೆಯ ಮಹತ್ವವನ್ನು ವಿವರಿಸಿದ್ದಾರೆ.
ಗ್ರಾಮೀಣ ಭಾರತ ಕೌಶಲ್ಯರಹಿತ ನಿರುದ್ಯೋಗಿಗಳಿಗೆ, ಕಾರ್ಮಿಕರಿಗೆ ಉದ್ಯೋಗವನ್ನು ಖಾತರಿಗೊಳಿಸಲು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸಲು 2006ರ ಫೆಬ್ರವರಿ 2ನೇ ತಾರೀಖಿನಂದು ನರೇಗಾ ಯೋಜನೆ ದೇಶದಲ್ಲಿ ಅನುಷ್ಠಾನಕ್ಕೆ ಬಂತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಾಯ್ದೆ ರೂಪಿಸಿ ಜಾರಿಗೆ ತಂದ ಈ ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಕ್ರಾಂತಿ ರೂಪಿಸಿದೆ. ಗ್ರಾಮ ಭಾರತದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನರೇಗಾ ಯೋಜನೆ ಮಹತ್ವದ ಪಾತ್ರ ವಹಿಸಿದೆ ಎಂದು ಪ್ರಿಯಾಂಕ್ ಖರ್ಗೆ ಸಂತಸ ವ್ಯಕ್ತಪಡಿಸಿದರು.

ಇನ್ನು ದೇಶದ ಅಭಿವೃದ್ಧಿಯಲ್ಲಿ ನರೇಗಾ ಪಾತ್ರ ವಿವರಿಸಿದ ಅವರು, ಗ್ರಾಮೀಣ ಜನತೆಗೆ ವಾರ್ಷಿಕ 100 ದಿನಗಳ ಉದ್ಯೋಗವನ್ನು ಖಾತ್ರಿಗೊಳಿಸುವುದರೊಂದಿಗೆ ಅವರನ್ನು ಆರ್ಥಿಕವಾಗಿ ಸದೃಢಗೊಳಿಸಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಮಹಿಳೆಯರಿಗೂ ದುಡಿಮೆಯ ಅವಕಾಶ ಕಲ್ಪಿಸಿ ಸ್ವಾವಲಂಬಿಗಳನ್ನಾಗಿ ಮಾಡಿದೆ.
ಅತಿವೃಷ್ಟಿ, ಅನಾವೃಷ್ಟಿಯ ಸಂದರ್ಭದಲ್ಲಿ ಗ್ರಾಮೀಣ ಜನರ ಕೈ ಹಿಡಿದಿದೆ, ವಲಸೆ ಪ್ರಮಾಣವನ್ನು ತಗ್ಗಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ. ರೈತರು ಕೃಷಿ, ತೋಟಗಾರಿಕೆಯಲ್ಲಿ ನರೇಗಾ ಯೋಜನೆಯ ಲಾಭ ಪಡೆದಿದ್ದಾರೆ. ರಸ್ತೆ, ಚರಂಡಿ, ಕೆರೆ ಅಭಿವೃದ್ಧಿ, ಶಾಲಾ ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ನರೇಗಾ ಸರ್ವ ವ್ಯಾಪಿಯಾಗಿ ಕೆಲಸ ಮಾಡಿದೆ.

ನೈಸರ್ಗಿಕ ನೀರಿನ ಸುಸ್ಥಿರತೆ ಕಾಯ್ದುಕೊಳ್ಳಲು ಹಾಗೂ ಇಂಗು ಗುಂಡಿಗಳನ್ನು ನಿರ್ಮಿಸಲು ನರೇಗಾ ಸಹಾಯಕವಾಗಿದೆ. ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯದಲ್ಲಿ ಸುಮಾರು 10,000 ಹೊರ ಗುತ್ತಿಗೆ ನೌಕರರಿಗೆ ಉದ್ಯೋಗ ನೀಡಲಾಗಿದೆ. ರಾಜ್ಯದಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ನಮ್ಮ ಸರ್ಕಾರ ಪ್ರಾಮಾಣಿಕ ಕಾಳಜಿ ವಹಿಸಿದೆ ಎಂದರು.
2023-24ರಿಂದ ಇಲ್ಲಿಯವರೆಗೆ ನರೇಗಾ ಯೋಜನೆಯಲ್ಲಿ ಕರ್ನಾಟಕದ ಸಾಧನೆ
*36515 ಜಾನುವಾರು ಶೆಡ್ ನಿರ್ಮಾಣ
*299 ಸ್ಮಶಾನ ಅಭಿವೃದ್ಧಿ
*10295 ಬಚ್ಚಲು ಗುಂಡಿ ನಿರ್ಮಾಣ
*500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆಗೆ ಚಾಲನೆ
*3869 ಕೂಸಿನ ಮನೆಗಳ ಸ್ಥಾಪನೆ
*2139 ಅಂಗನವಾಡಿಗಳ ನಿರ್ಮಾಣ
*3395 ಶಾಲಾಭಿವೃದ್ಧಿ ಕಾಮಗಾರಿಗಳು
*3184 ಕಿ. ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿ
*10894 ಕೆರೆಗಳ ಅಭಿವೃದ್ಧಿ
*17.31 ಲಕ್ಷ ಒಟ್ಟು ಸೃಜಿಸಲಾದ ಗ್ರಾಮೀಣ ಆಸ್ತಿಗಳು
*24.75 ಕೋಟಿ ಮಾನವ ದಿನಗಳ ಸೃಜನೆ
*55 ಲಕ್ಷಕ್ಕೂ ಹೆಚ್ಚು ಉದ್ಯೋಗ ಪಡೆದ ಕೂಲಿಕಾರರು. ಇವು ನರೇಗಾ ಯೋಜನೆಯಲ್ಲಿ ಕರ್ನಾಟಕದ ಸಾಧನೆಗಳು. ನರೇಗಾ ಯೋಜನೆಯ ಸಮರ್ಥ ಅನುಷ್ಠಾನ ನಮ್ಮ ಸರ್ಕಾರದ ಸಂಕಲ್ಪ ಎಂದು ಪ್ರಿಯಾಂಕ್ ಖರ್ಗೆ ಹೆಮ್ಮೆ ವ್ಯಕ್ತಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications