ಕರ್ನಾಟಕದಲ್ಲಿ ಮೂರು ಡಿಸಿಎಂ ಹುದ್ದೆ ಕುರಿತು ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ
ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಕರ್ನಾಟಕಕ್ಕೆ ಮೂರು ಉಪಮುಖ್ಯಮಂತ್ರಿಗಳನ್ನು ಕೊಡಬೇಕು ಎಂಬ ಚರ್ಚೆ ಆರಂಭಿಸಿದ ಕೆಲವೇ ದಿನಗಳಲ್ಲಿ ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸತೀಶ್, ಡಿಸಿಎಂ ಹುದ್ದೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ನಾನು ಈಗಾಗಲೇ ಸರ್ಕಾರದಲ್ಲಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಡಿಸಿಎಂ ಹುದ್ದೆ ಕೇವಲ ಬಡ್ತಿಯಾಗಿದೆ. ಮೇ 10 ರಂದು ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಸಮುದಾಯಗಳು ಕಾಂಗ್ರೆಸ್ಗೆ ಮತ ಹಾಕಿವೆ ಎಂದು ಸತೀಶ್ ಹೇಳಿದರು.
ಪ್ರಮುಖ ಸಮುದಾಯಗಳು ಡಿಸಿಎಂ ಹುದ್ದೆಗೆ ಹಕ್ಕು ಸಾಧಿಸುವುದು ತಪ್ಪಲ್ಲ ಎಂದ ಅವರು, "ಡಿಸಿಎಂ ಹುದ್ದೆ ಬೇಡಿಕೆಯನ್ನು ಸರ್ಕಾರ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ನಿಯಂತ್ರಿಸುವ ಪ್ರಯತ್ನ ಎಂದು ಪರಿಗಣಿಸಬಾರದು. ಹೆಚ್ಚಿನ ಡಿಸಿಎಂ ಹುದ್ದೆಗಳ ಬೇಡಿಕೆಯೊಂದಿಗೆ ಯಾರ ಪ್ರಭಾವವನ್ನು ದುರ್ಬಲಗೊಳಿಸುವ ಪ್ರಯತ್ನವಿಲ್ಲ ಎಂದು ತಿಳಿಸಿದರು.
ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ರಚಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಅದು ಸಾಮಾಜಿಕ ನ್ಯಾಯವನ್ನು ಮಾತ್ರ ನೀಡುತ್ತದೆ. ಹೆಚ್ಚಿನ ಡಿಸಿಎಂಗಳನ್ನು ನೇಮಕ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ಗೆ ಬಿಡಲಾಗಿದೆ ಎಂದು ಅವರು ಪುನರುಚ್ಚರಿಸಿದರು.
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ನಿರ್ಧಾರ ಒಳ್ಳೆಯದು. ಗುತ್ತಿಗೆದಾರರ ಬಾಕಿ ಬಿಲ್ಗಳನ್ನು ಸರ್ಕಾರವು ಆದ್ಯತೆಯ ಮೇಲೆ ತೆರವುಗೊಳಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ದುರುಪಯೋಗದಿಂದ ಮಾತ್ರ ಬಾಕಿ ಬಿಲ್ಗಳು ಏರಿಕೆಯಾಗುತ್ತಿವೆ ಎಂದು ಅವರು ಆರೋಪಿಸಿದರು.
ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದರೆ ಎಲ್ಲಾ ಸಮುದಾಯಗಳು ನಮಗೆ ಬೆಂಬಲ ನೀಡಲು ಅನುಕೂಲ ಆಗುತ್ತದೆ. ಪರಿಶಿಷ್ಟ ಜಾತಿ-ಪಂಗಡ, ಅಲ್ಪಸಂಖ್ಯಾತರಿಗೆ, ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಸೃಷ್ಟಿ ಮಾಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆಯುತ್ತೇನೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದರು.
ಮುಂದಿನ ತಿಂಗಳ ಮೊದಲ ವಾರದಲ್ಲಿ ಹೈಕಮಾಂಡ್ ಮುಖಂಡರನ್ನು ಭೇಟಿ ಮಾಡುತ್ತೇನೆ. ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಹೈಕಮಾಂಡ್ ನಿರ್ಣಯ ಮಾಡಬೇಕು. ಹೈಕಮಾಂಡ್ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ. ಪಕ್ಷದ ಹಿತದೃಷ್ಟಿಯಿಂದ ಇದು ಒಳ್ಳೆಯದು. ಈ ಹೇಳಿಕೆಗೆ ಯಾರು ಸಹಮತ ನೀಡುತ್ತಾರೋ ಅವರನ್ನೆಲ್ಲ ಕರೆದುಕೊಂಡು ಹೋಗ್ತೀನಿ ಎಂದು ತಿಳಿಸಿದ್ದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications