ಆರ್ಟಿಇ ಅಡಿ ಪ್ರವೇಶಕ್ಕೆ ಜ.6ರಿಂದ ಅರ್ಜಿ ಸಲ್ಲಿಸಿ
ಬೆಂಗಳೂರು, ಡಿ. 23 : ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (ಆರ್ಟಿಇ )ಕಾಯ್ದೆಯಡಿ 2013-14 ಸಾಲಿನ ಪ್ರವೇಶಕ್ಕಾಗಿ ಜ.6ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಾರ್ಷಿಕ ವರಮಾನ 3.50 ಲಕ್ಷ ರೂ. ಮಿತಿಯಲ್ಲಿರುವವರು ಈ ಯೋಜನೆಗೆ ಅರ್ಹರಾಗಿದ್ದು, ಎಲ್ಕೆಜಿ ಹಾಗೂ 1 ನೇ ತರಗತಿಗೆ ಈ ಯೋಜನೆಯಡಿ ಪ್ರವೇಶ ಪಡೆಯಬಹುದು.
ಭಾನುವಾರ ಬೆಂಗಳೂರಿನಲ್ಲಿ ಆರ್ಟಿಇ ಕಾರ್ಯಪಡೆ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ ಹಾಗೂ 'ಆರ್ಟಿಇ ಮಾಹಿತಿ ಕರಪತ್ರ' ಬಿಡುಗಡೆ ಸಮಾರಂಭದಲ್ಲಿ ಪೋಷಕರಿಗೆ ಆರ್ಟಿಇ ಕುರಿತ ಮಾಹಿತಿಗಳನ್ನು ನೀಡಲಾಗಿದೆ. ಆರ್ಟಿಇ ಅಡಿ ಅರ್ಜಿ ತುಂಬುವ ವಿಧಾನ ಮತ್ತು ಏನೇನು ದಾಖಲೆಗಳು ಬೇಕು ಎಂಬುದರ ಮಾಹಿತಿಯೂ ಅರ್ಜಿಯ ಹಿಂಭಾಗದಲ್ಲಿ ಲಭ್ಯವಿರಲಿದೆ ಎಂದು ಫೋಷಕರಿಗೆ ಮಾಹಿತಿ ನೀಡಲಾಯಿತು.

ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಗಳಲ್ಲಿ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಾಲೆಗಳು ಮತ್ತು ಸೀಟುಗಳ ಮಾಹಿತಿ ಜ.6ರಂದು ಪ್ರಕಟವಾಗಲಿದೆ. ಜ.6ರಿಂದ ಫೆ.8ರವರೆಗೆ ಪೋಷಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫೆ.17 ರಂದು ಎಲ್ಲಾ ಶಾಲೆಗಳ ಮುಖ್ಯಸ್ಥರು ಸ್ವೀಕರಿಸಿದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಫೆ.28ರೊಳಗೆ ಅರ್ಜಿಗಳನ್ನು ಪರಿಶೀಲಿಸಿ, ಅನುಮೋದನೆ ನೀಡಲಿದ್ದು, ಮಾ.3ರಿಂದ ಪೋಷಕರು ಆಯಾ ಶಾಲೆಗಳಿಗೆ ಭೇಟಿ ನೀಡಿ ಶಾಲೆಯ ಆರಂಭ ಸೇರಿದಂತೆ ಇತರ ಚಟುವಟಿಕೆಗಳ ಮಾಹಿತಿ ಪಡೆಯಬಹುದಾಗಿದೆ. ವಾರ್ಷಿಕ ವರಮಾನ 3.50 ಲಕ್ಷ ರೂ. ಮಿತಿಯಲ್ಲಿರುವವರು ಈ ಯೋಜನೆಗೆ ಅರ್ಹರಾಗಿದ್ದು ಅರ್ಜಿ ಸಲ್ಲಿಸಬಹುದಾಗಿದೆ.
ಶಾಲೆಗಳಿಗೆ ನಷ್ಟವಿಲ್ಲ : ಆರ್ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳು ಬಡ ಮಕ್ಕಳಿಗೆ ಶೇ.25ರಷ್ಟು ಸೀಟುಗಳನ್ನು ನೀಡುವುದರಿಂದ ಅವುಗಳಿಗೆ ಯಾವುದೇ ನಷ್ಟ ಉಂಟಾಗುವುದಿಲ್ಲ. ಒಬ್ಬ ವಿದ್ಯಾರ್ಥಿಗಳಿಗೆ ವರ್ಷಕ್ಕೆ 11,500 ರೂ.ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 65:35ರ ಅನುಪಾತದಲ್ಲಿ ಹಣ ನೀಡುತ್ತದೆ.
ಆದಾಯ ಮಿತಿ : ಆರ್ಟಿಇ ಕಾಯ್ದೆ ಪ್ರಕಾರ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವವರ ವಾರ್ಷಿಕ ವರಮಾನ 3.50 ಲಕ್ಷ ರೂ. ನಿಗದಿಪಡಿಸಲಾಗಿದೆ. ಆದರೆ, ಪೋಷಕರ ಒತ್ತಾಯದ ಮೇರೆಗೆ 1 ಲಕ್ಷ ರೂ. ಮಿತಿಯಲ್ಲಿರುವವರಿಗೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ನಂತರ 3.50 ಲಕ್ಷ ರೂ.ವರೆಗಿನ ವರಮಾನ ಬರುವವರಿಗೆ ಅವಕಾಶ ದೊರೆಯುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications