ರೋಹಿಣಿ ಸಿಂಧೂರಿ ವಿರುದ್ಧ ಕೊಲೆ ಆರೋಪ ಮಾಡಿದ ಗಾಯಕ ಲಕ್ಕಿ ಅಲಿ, ಪ್ರಕರಣವೇನು ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 05: ಬೆಂಗಳೂರಿನಲ್ಲಿ ದೀರ್ಘಕಾಲದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಬೆಂಗಳೂರಿನ ಭೂಮಾಫಿಯಾ ತನ್ನನ್ನು ಕೊಲ್ಲಲು ಯತ್ನಿಸುತ್ತಿದೆ ಎಂದು ಗಾಯಕ ಲಕ್ಕಿ ಅಲಿ ಆರೋಪಿಸಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಅವರ ಐಎಎಸ್ ಪತಿ ಸುಧೀರ್ ರೆಡ್ಡಿ ಕೂಡ ಭೂ ಮಾಫಿಯಾದೊಂದಿಗೆ ಕೈಜೋಡಿಸಿ ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಕೆಂಚೇನಹಳ್ಳಿ ಯಲಹಂಕ ಬಳಿ ತಮ್ಮ ಜಮೀನನ್ನು ಭೂಮಾಫಿಯಾ ಅಕ್ರಮವಾಗಿ ಒತ್ತುವರಿ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಲಿ ಆರೋಪಿಸಿ ಪೋಸ್ಟ್ ಮಾಡಿದ್ದಾರೆ.

ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಲ್ಯಾಂಡ್ ಮಾಫಿಯಾದಿಂದ ಸುಧೀರ್ ರೆಡ್ಡಿ (ಮತ್ತು ಮಧು ರೆಡ್ಡಿ) ಅಕ್ರಮವಾಗಿ ಒತ್ತುವರಿ ಮಾಡುತ್ತಿದ್ದಾರೆ. ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯಾಗಿರುವ ಪತ್ನಿಯ ನೆರವಿನಿಂದ ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಭೂಮಾಫಿಯಾ ಬಲವಂತವಾಗಿ ಮತ್ತು ಅಕ್ರಮವಾಗಿ ನನ್ನ ಜಮೀನಿನನ್ನು ಅತಿಕ್ರಮಿಸುತ್ತಿದ್ದಾರೆ. ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ. ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ನನಗೆ ತಿಳಿಸುತ್ತಿದ್ದಾರೆ. ಆದರೆ ನಾವು ಆಸ್ತಿಯೊಳಗೆ ಬರಲು ನ್ಯಾಯಾಲಯದ ಆದೇಶವನ್ನು ಹೊಂದಿಲ್ಲ ಮತ್ತು ನಾವು ಸ್ವಾಧೀನಪಡಿಸಿಕೊಂಡಿದ್ದೇವೆ. ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಲಕ್ಕಿ ಅಲಿ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದಿದ್ದಾರೆ.
ಅಲಿ ಅವರು ದಯಾನಂದ ಪೈ, ಸತೀಶ್ ಪೈ, ಅಶ್ವಿನ್ ಪೈ, ಪಾವಿ ಪೈ ಮತ್ತು ಸೆಂಚುರಿ ಬಿಲ್ಡರ್ಗಳಾದ ಶೆಣೈ ರಘುನಾಥ್ ಮತ್ತು ಇತರ ಕೆಲವು ವ್ಯಕ್ತಿಗಳು ಸ್ಥಳೀಯ ರೌಡಿಗಳಾದ ಆಸಿಫ್ ಇಕ್ಬಾಲ್ ಅವರನ್ನು ತನ್ನ ಮೇಲೆ ದಾಳಿ ನಡೆಸಲು ನೇಮಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಭೂ ವಿವಾದ 1990ರ ದಶಕದಿಂದಲೂ ಇದೆ. ಗಾಯಕ ಲಕ್ಕಿ ಅಲಿ ಅವರ ತಂದೆ ಮೊಹಮ್ಮದ್ ಅಲಿ ಅವರು 1969 ರಲ್ಲಿ 400 ಎಕರೆ ಭೂಮಿಯನ್ನು ಖರೀದಿಸಿದ್ದರು. 400 ಎಕರೆಯಲ್ಲಿ 220 ಎಕರೆ ಭೂಮಿಯನ್ನು ಹಲವು ವರ್ಷಗಳಲ್ಲಿ ವಿವಿಧ ತೊಡಕುಗಳಿಂದ ಕಳೆದುಕೊಂಡಿತು. ಉಳಿದ 160 ಎಕರೆ ಭೂಮಿಯನ್ನು ಮೊಹಮ್ಮದ್ ಅಲಿ ಅವರ ಆರು ಮಕ್ಕಳಿಗೆ ಟ್ರಸ್ಟ್ ರಚಿಸುವ ಮೂಲಕ ವರ್ಗಾಯಿಸಿದರು. 1991ರಲ್ಲಿ, ಮೊಹಮ್ಮದ್ ಅಲಿ ಒಡೆತನದ ಸಂಪೂರ್ಣ ಭೂಮಿಯನ್ನು ಎರಡು ವಿಭಿನ್ನ ರೀಲರ್ಗಳಿಗೆ ಮಾರಾಟ ಮಾಡಲಾಯಿತು. ಇದು ಕಾನೂನು ವಿವಾದಗಳಿಗೆ ಕಾರಣವಾಯಿತು.
ಈ ಸಂಬಂಧ ವಕೀಲರು ಮೊಹಮ್ಮದ್ ಅಲಿ ಅವರಿಗೆ ಇರುವ ಅನಾರೋಗ್ಯದ ಲಾಭವನ್ನು ಭೂಮಾಫಿಯಾದವರು ಪಡೆದುಕೊಂಡಿದ್ದು ಜಮೀನು ವ್ಯವಹಾರಗಳು ಮತ್ತು ದಾಖಲೆಗಳನ್ನು ತಿರುಚಿದ್ದಾರೆ. ಇದರಿಂದ ವಿವಾದ ಉಂಟಾಗಿದೆ. ಲಕ್ಕಿ ಅಲಿ ಅವರ ಕುಟುಂಬ ಮತ್ತು ಮಕ್ಕಳು ಕೆಂಚೇನಹಳ್ಳಿ ಯಲಹಂಕದಲ್ಲಿರುವ ಜಮೀನಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿಸಿದ್ದಾರೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್









Click it and Unblock the Notifications