Singer Mangli: ಬಳ್ಳಾರಿ ಉತ್ಸವದಲ್ಲಿ ಕಾರಿನ ಮೇಲೆ ದಾಳಿ, ಗಾಯಕಿ ಮಂಗ್ಲಿ ಹೇಳಿದ್ದು ಹೀಗೆ
ಬೆಂಗಳೂರು, ಜ. 23: ಬಳ್ಳಾರಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಜನಪ್ರಿಯ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿತ್ತು. ಈ ವರದಿಗಳನ್ನು ಗಾಯಕಿ ನಿರಾಕರಿಸಿ ಸ್ಪಷ್ಟಿಕರಣ ನೀಡಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂಬ ವರದಿಯನ್ನು ಅಲ್ಲಗಳೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ತನ್ನನ್ನು ನೋಡಿಕೊಳ್ಳುತ್ತಿದ್ದರು. ತಾನು ಭಾಗವಹಿಸಿದ್ದ ಬಳ್ಳಾರಿಯ ಕಾರ್ಯಕ್ರಮವೂ ಯಶಸ್ವಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲ ದುಷ್ಕರ್ಮಿಗಳು ಬಳ್ಳಾರಿಯಲ್ಲಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮಂಗ್ಲಿ ಅವರ ಕಾರಿಗೂ ಹಾನಿಯಾಗಿದೆ ಎಂದು ಹಲವು ವರದಿಗಳು ತಿಳಿಸಿವೆ. ಘಟನೆ ನಡೆದಾಗ ತಾನು ಕಾರಿನಲ್ಲಿ ಇರಲಿಲ್ಲ ಮತ್ತು ಅದು ತನ್ನ ಕಾರಲ್ಲ ಎಂದು ಮಂಗ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿರುವ ಅವರು, "ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿನ್ನೆ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮಗಳು ಹರಡಿದ ತಪ್ಪು ಸುದ್ದಿಯನ್ನು ನಾನು ಸಂಪೂರ್ಣವಾಗಿ ನಿರಾಕರಿಸುತ್ತೇನೆ" ಎಂದಿದ್ದಾರೆ,
I completely deny Fake news on some social media groups about me…
— Mangli Official (@iamMangli) January 22, 2023
Please don’t spread wrong news pic.twitter.com/oy71WFEzFw
" ನಾನು ಭಾಗವಹಿಸಿದ್ದ ಕಾರ್ಯಕ್ರಮ ಒಂದು ದೊಡ್ಡ ಯಶಸ್ಸನ್ನು ಪಡೆದಿದೆ ಎಂಬುದನ್ನು ನೀವು ಫೋಟೋಗಳು ಮತ್ತು ವಿಡಿಯೋಗಳಲ್ಲಿ ನೋಡಿದ್ದಿರಿ, ಕನ್ನಡದ ಜನರು ನನ್ನ ಮೇಲೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಾರೆ. ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡ ಅಧಿಕಾರಿಗಳ ಬಗ್ಗೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನನ್ನ ಇಮೇಜ್ ಹಾಳು ಮಾಡಲು ಇದೆಲ್ಲವನ್ನೂ ಮಾಡಲಾಗುತ್ತಿದೆ. ಈ ರೀತಿಯ ಸುಳ್ಳು ಪ್ರಚಾರವನ್ನು ನಾನು ಖಂಡಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಂಗ್ಲಿ ವೇದಿಕೆಯಲ್ಲಿ ತೆಲುಗು ಭಾಷೆಯಲ್ಲಿ ಮಾತನಾಡಲು ಆರಂಭಿಸಿದ್ದರು. ಈ ವೇಳೆ ನಿರೂಪಕಿ ಅನುಶ್ರೀ ಆಕೆಯನ್ನು ಕನ್ನಡದಲ್ಲಿ ಮಾತನಾಡುವಂತೆ ತಿಳಿಸಿದಾಗ, "ನಾನು ತೆಲುಗಿನಲ್ಲಿ ಮಾತನಾಡುತ್ತೇನೆ. ಏಕೆಂದರೆ ಅನಂತಪುರ (ಆಂಧ್ರಪ್ರದೇಶ) ಹತ್ತಿರದಲ್ಲಿದೆ. ಆದ್ದರಿಂದ ಇಲ್ಲಿ ಎಲ್ಲರು ತೆಲುಗು ಅರ್ಥಮಾಡಿಕೊಳ್ಳುತ್ತಾರೆ " ಎಂದು ಹೇಳಿದ್ದರು.
ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು. ಹೊಗಿನವರನ್ನು ಕರೆಸಿ ಕನ್ನಡಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅನೇಕ ಕನ್ನಡ ಪರ ಹೋರಾಟಗಾರರು, ಸಂಘಟನೆಗಳು ಮಂಗ್ಲಿ ಕರ್ನಾಟಕದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications