Sonu Nigam Row: ಸೋನು ನಿಗಮ್ಗೆ ಕನ್ನಡ ಚಿತ್ರರಂಗದಿಂದ ಶಾಕ್, ಪೊಲೀಸ್ ನೋಟಿಸ್
ಬೆಂಗಳೂರು, ಮೇ 05: ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಕೆ ಮಾಡಿದ ಗಾಯಕ ಸೋನು ನಿಗಮ್ (Sonu Nigam Ban) ಸ್ಪಷ್ಟನೆ ನೀಡಿದರೆ ಹೊರತು ಕನ್ನಡಿಗರನ್ನು ಕ್ಷಮೆ ಕೇಳಲು ಮುಂದಾಗಿಲ್ಲ. ಹೀಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗಾಯಕನ ವಿರುದ್ಧ ಸೂಕ್ತ ಕ್ರಮ ಜರುಗಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಸಹ ನೋಟಿಸ್ ನೀಡಿದ್ದಾರೆ. ಈ ಬೆಳವಣಿಗೆ ಸೋನು ನಿಗಮ್ ವೃತ್ತಿ ಬದುಕಿನ ಮೇಲೆ ಪರಿಣಾಮ ಬೀರಲಿದೆ.
ಸೋನು ನಿಗಮ್ ಇತ್ತೀಚೆಗೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಕ್ಕೆ ''ಹೀಗೆ ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ನಲ್ಲಿ ಅಟ್ಯಾಕ್ ಆಗಿದ್ದ' ಎಂದು ಹೇಳುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್) ಇನ್ನು ಮುಂದೆ ಸೋನಿ ನಿಗಮ್ನಿಂದ ಯಾವುದೇ ಕನ್ನಡ ಹಾಡನ್ನು ಹಾಡಿಸದಿರಲು ಹಾಗೂ ಮ್ಯೂಸಿಕಲ್ ನೈಟ್ ಮಾಡದಿರಲು ನಿರ್ಧರಿಸಲಾಗಿದೆ.

ಕಾರ್ಯಕ್ರಮವೊಂದಲ್ಲಿ ಹಿಂದಿ ಹಾಡು ಹಾಡುತ್ತಿದ್ದ ಸೋನು ನಿಗಮ್ ಗೆ ಕನ್ನಡಾಭಿಮಾನಿಯೊಬ್ಬ ಕನ್ನಡ ಹಾಡು ಹಾಡಿ ಸರ್ ಎಂದು ಕೇಳಿದ್ದಾನೆ. ಇದಕ್ಕೆ ಗಾಯಕ ಕನ್ನಡ ಕನ್ನಡ ಎಂದಿದ್ದಕ್ಕೆ ಕಾಶ್ಮೀರದಲ್ಲಿ ಉಗ್ರ ದಾಳಿ ನಡೆದಿದೆ ಎಂದು ಹೇಳಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಬಹುತೇಕ ಮಂದಿ ಕನ್ನಡದಿಂದ ಬೆಳದು, ಇಲ್ಲಿಂದ ಹೆಸರು ಮಾಡಿ, ಖ್ಯಾತಿ ಹಣ ಬಂದ ಮೇಲೆ ಈ ರೀತಿಯ ದುರಹಂಕಾರದ ಮಾತು ಸರಿಯಲ್ಲ ಎಂದಿದ್ದಾರೆ. ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ವಿವಾದಾತ್ಮಕ ಹೇಳಿಕೆಯ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆ ಎರಡು ದಿನಗಳ ಬಳಿಕ ಸ್ಪಷ್ಟನೆ ನೀಡಿರುವ ಸೋನು ನಿಗಮ್ ಕ್ಷಮೇ ಕೇಳಲಿಲ್ಲ.
ಫಿಲ್ಮ್ ಚೇಂಬರ್ನಿಂದ ಶ್ಲಾಘನೀಯ ಕ್ರಮ
ಈ ಕಾರಣದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್) ಅಧ್ಯಕ್ಷ ನರಸಿಂಹಲು ಅವರು ಪ್ರತಿಕ್ರಿಯಿಸಿ, ಗಾಯಕನ ಹೇಳಿಕೆ ಗಂಭೀರವಾಗಿ ಪರಗಣಿಸಿದ್ದಾರೆ. ಘಟನೆ ಬಳಿಕ ಗಾಯಕ ಕ್ಷಮೆ ಕೇಳಿಲ್ಲ. ಅವರಿಂದ ಚಿತ್ರರಂಗದಲ್ಲಿ ಮ್ಯೂಸಿಕಲ್ ನೈಟ್ಸ್ ಮಾಡುವುದು, ಸಿನಿಮಾಗಳಿಗೆ ಹಾಡು ಹಾಡಿಸುವುದು ನಿಷೇಧಿಸಿದೆ. ಯಾರು ಸಹ ಅವರಿಗೆ ಸಹಕಾರ ನೀಡದಂತೆ ಅವರು ಎಲ್ಲ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ. ಈ ಮೂಲಕ ಕನ್ನಡವನ್ನು ಹಗುರವಾಗಿ ಪರಿಗಣಿಸುವವರಿಗೆ ಫಿಲ್ಮ್ ಚೇಂಬರ್ ತಕ್ಕ ಉತ್ತರ ನೀಡಿದೆ ಎನ್ನಬಹುದು.
ಗಾಯಕನಿಗೆ ಪೊಲೀಸ್ ನೋಟಿಸ್
ಚಿತ್ರರಂಗದಿಂದ ಅಹಕಾರ ವ್ಯಕ್ತವಾದ ಬೆನ್ನಲ್ಲೆ ಆವಲಹಳ್ಳಿ ಪೊಲೀಸರು ಈಗಾಗಲೇ ಸೋನು ನಿಗಮ್ ಕನ್ನಡ ಮತ್ತು ಪಹಲ್ಗಾಮ್ ಹೇಳಿಕೆಗೆ ಸಂಬಂಧಿಸಿದ ಸಾಫ್ಟ್ ಕಾಪಿ ನೋಟಿಸ್ ಮೇಲೆ ಮಾಡಿದ್ದಾರೆ. ನೋಟಿಸ್ ನೀಡಿದ ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications