ಒಂದಂಕಿ ಲಾಟರಿ ಹಗರಣಕ್ಕೆ ಸಿಬಿಐ ದೊಡ್ಡ ನಮಸ್ಕಾರ!
ಬೆಂಗಳೂರು, ಜುಲೈ 14 : ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಹುಕೋಟಿ ರೂಪಾಯಿ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಳ್ಳುವುದಿಲ್ಲ. ಈ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಆರೋಪಗಳಿಗೂ ಸೂಕ್ತವಾದ ಸಾಕ್ಷ್ಯಗಳು ಪ್ರಾಥಮಿಕ ತನಿಖೆಯಲ್ಲಿ ಸಿಬಿಐಗೆ ಲಭ್ಯವಾಗಿಲ್ಲ.
ಜನರ ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿದ್ದ ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಆದರೆ, ಪ್ರಕರಣದ ತನಿಖೆ ಆರಂಭಿಸುವ ಮೊದಲು ಸಿಬಿಐ ಪ್ರಾಥಮಿಕ ಮಾಹಿತಿ ಸಂಗ್ರಹಣೆ ಮಾಡಿದೆ. ಅದರ ಅನ್ವಯ ಈ ಹಗರಣದ ತನಿಖೆಯನ್ನು ಕೈಗೆತ್ತಿಕೊಳ್ಳದಿರಲು ನಿರ್ಧರಿಸಿದೆ. [ಲಾಟರಿ ಹಗರಣ ಸಿಬಿಐ ತನಿಖೆ ಎಲ್ಲಿಗೆ ಬಂತು?]

ಲಾಟರಿ ಹಗರಣದ ತನಿಖೆಯನ್ನು ಮೊದಲು ರಾಜ್ಯದ ಪೊಲೀಸರು ನಡೆಸುತ್ತಿದ್ದರು. ಪೊಲೀಸ್ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದ ತಕ್ಷಣ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ಪಟ್ಟು ಹಿಡಿದಿದ್ದವು. ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. [ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ?]
ಈ ಪ್ರಕರಣ ತಾನು ತನಿಖೆ ನಡೆಸಲು ಸೂಕ್ತವಾದದ್ದೇ? ಎಂಬುದನ್ನು ಅಧ್ಯಯನ ಮಾಡಿದ ಬಳಿಕ ಸಿಬಿಐ ತನಿಖೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಹಲವಾರು ಬಾರಿ ರಾಜ್ಯ ಸರ್ಕಾರಗಳು ತನಿಖೆಗೆ ನೀಡಿದ ಪ್ರಸ್ತಾವನೆಗಳನ್ನು ಸಿಬಿಐ ತಿರಸ್ಕಾರ ಮಾಡಿದ ಉದಾಹರಣೆಗಳಿವೆ. [ಸಿಬಿಐ, ಸಿಐಡಿ ತನಿಖೆಗೆ ವ್ಯತ್ಯಾಸವೇನು?]
ಅಲೋಕ್ ಕುಮಾರ್ ಭಾಗಿಯಾಗಿಲ್ಲ : ಒಂದಂಕಿ ಲಾಟರಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಭಾಗಿಯಾಗಿರುವ ಕುರಿತು ಸೂಕ್ತವಾದ ಸಾಕ್ಷ್ಯಗಳು ಸಿಕ್ಕಿಲ್ಲ. ಕರ್ನಾಟಕ ಸರ್ಕಾರ ಅಲೋಕ್ ಕುಮಾರ್ ಹೆಸರು ಕೇಳಿಬಂದ ತಕ್ಷಣ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. [ಲಾಟರಿ ಸಾಮ್ರಾಜ್ಯಕ್ಕೆ ಈತನೇ ಕಿಂಗ್]
ಲಾಟರಿ ಹಗರಣ ಕಿಂಗ್ ಪಿನ್ ಪಾರಿರಾಜನ್ ಗೊತ್ತು. ಆದರೆ, ಆತನ ಜೊತೆ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ತಮ್ಮ ಮೇಲೆ ಆರೋಪ ಕೇಳಿಬಂದಾಗಲೇ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದರು. ಈಗ ಸಿಬಿಐ ಸಹ ತನ್ನ ಪ್ರಾಥಮಿಕ ತನಿಖೆಯಲ್ಲಿ ಇದೇ ಮಾಹಿತಿಯನ್ನು ಸಂಗ್ರಹ ಮಾಡಿದೆ.
ಅಂದಹಾಗೆ 2015ರ ಮೇ 26ರಂದು ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿತ್ತು. ಕರ್ನಾಟಕದ ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಈಗಾಗಲೇ ಸಿಬಿಐ ನಡೆಸುತ್ತಿದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications