ಏ.17ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ
ಬೆಂಗಳೂರು, ಮಾ.5 : ಕೇಂದ್ರ ಚುನಾವಣಾ ಆಯೋಗವು 2014ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 16ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಕೇಂದ್ರ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿನ ಚುನಾವಣಾ ಪ್ರಕ್ರಿಯೆ ಮಾರ್ಚ್ 19ರಂದು ಆರಂಭವಾಗಲಿದ್ದು, ಅಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ. ಅಂದಿನಿಂದಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. [ಚುನಾವಣಾ ವೇಳಾಪಟ್ಟಿ ನೋಡಿ]
ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು ಒಂದು ತಿಂಗಳ ಬಳಿಕ ಮೇ. 16ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸಿ : ದೇಶದಲ್ಲಿ ಒಟ್ಟು 10 ಕೋಟಿ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 81.4 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಮಾರ್ಚ್ 9ರೊಳಗೆ ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. [ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ?]

ಅಧಿಸೂಚನೆ ಜಾರಿ - ಮಾರ್ಚ್ 19
ಕರ್ನಾಟಕದಲ್ಲಿನ ಚುನಾವಣಾ ಪ್ರಕ್ರಿಯೆ ಮಾರ್ಚ್ 19ರಂದು ಆರಂಭವಾಗಲಿದ್ದು, ಅಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆ ದಿನ - ಮಾರ್ಚ್ 26
ಮಾರ್ಚ್ 19ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದ್ದು, ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ನಾಮಪತ್ರ ಪರಿಶೀಲನೆ - ಮಾರ್ಚ್ 27
ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ - ಮಾರ್ಚ್ 29
ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ವಾಪಸ್ ಪಡೆಯಲು ಮಾರ್ಚ್ 29 ಕೊನೆಯ ದಿನವಾಗಿದೆ.

ಏಪ್ರಿಲ್ 17ರಂದು ಚುನಾವಣೆ
ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 17ರಂದು ಚುನಾವಣೆ ನಡೆಯಲಿದೆ. 4,46,36,877 ಮತದಾರರು ಮತದಾನ ಮಾಡಲಿದ್ದಾರೆ.

ಕರ್ನಾಟಕದಲ್ಲಿ ಮಹಿಳಾ ಮತದಾರರು
ಕರ್ನಾಟಕದಲ್ಲಿ ಒಟ್ಟು 2,18,65,233 ಮಹಿಳಾ ಮತದಾರರು ಮತ ಚಲಾಯಿಸಲಿದ್ದಾರೆ.

ಒಟ್ಟು ಪುರುಷ ಮತದಾರರು
ಕರ್ನಾಟಕದಲ್ಲಿ ಒಟ್ಟು 2,27,78,644 ಪುರುಷ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

8 ಲಕ್ಷ ಮತದಾರರು
ಕರ್ನಾಟಕದಲ್ಲಿ 18-19 ವರ್ಷದ 8 ಲಕ್ಷ ಮತದಾರರಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications