ಸರ್ಕಾರಿ ಸಭೆ, ಸಮಾರಂಭದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ನಿಷೇಧ
ಬೆಂಗಳೂರು, ಸೆಪ್ಟೆಂಬರ್ 20; ಕರ್ನಾಟಕ ಸರ್ಕಾರ ಸರ್ಕಾರದ ವತಿಯಿಂದ ಆಯೋಜಿಸುವ ಅಧಿಕೃತ ಸಭೆ/ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಹಾಗೂ ಸರಬರಾಜು ನಿಷೇಧಿಸಿದೆ. ಈ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ.
ಕರ್ನಾಟಕದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ Single use ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ/ ಸರಬರಾಜನ್ನು ನಿಷೇಧಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.ಈ ಹಿಂದೆ ದಿನಾಂಕ 5/9/2018ರ ಆದೇಶವನ್ನು ಉಲ್ಲೇಖಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು ಎಂದು ಹೇಳಿದ್ದಾರೆ.
ಸುತ್ತೋಲೆಯ ವಿವರಗಳು; ಇಂತಹ ಸಭೆ/ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸಬೇಕು ಎಂದು ಸೂಚಿಸಲಾಗಿತ್ತು.
ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಮೇಲಿನ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ/ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪುನರುಚ್ಚರಿಸುತ್ತ ಇನ್ನುಮುಂದೆ ಎಲ್ಲಾ ಸಭೆ/ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಲ್ಲಿಸತಕ್ಕದ್ದು ಹಾಗೂ ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸೂಚಿಸಿದೆ ಎಂದು ಹೇಳಿದ್ದಾರೆ.
ಹಿಂದಿನ ಆದೇಶವೇನು?
ಈ ಹಿಂದಿನ ಸರ್ಕಾರಿ ಆದೇಶದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘಾಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತವೆ.
ಈ ಹಿನ್ನೆಯಲ್ಲಿ ಸರ್ಕಾರ ಪ್ಲಾಸ್ಟಿಕ್ ತ್ಯಾಜ್ಯದ ನಿಯಂತ್ರಣಕ್ಕಾಗಿ ಈಗಾಗಲೇ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತಿತರ ವಸ್ತುಗಳ ತಯಾರಿಕೆ, ಮಾರಾಟ, ದಾಸ್ತಾನು ಮತ್ತು ಉಪಯೋಗವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿಎ ಎಂದು ಹೇಳಿತ್ತು.
ಈ ನಿಷೇಧವು ಸಾಮಾಗ್ರಿಗಳ ಪ್ಯಾಕೇಜಿಂಗ್ ಮಾಡುವ ಸಂದರ್ಭದಲ್ಲಿ ಅವಿಭಾಜ್ಯವಾಗಿ (Integral part of package) ಬರುವ ಪ್ಲಾಸ್ಟಿಕ್ಗಳನ್ನು ಹೊರತುಪಡಿಸಿರುವುದರಿಂದ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳಿಗೆ (Single use packaged water bottles) ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿತ್ತು.
ಇಂತಹ ಬಾಟಲ್ಗಳ ಮೇಲೆ ನಿರ್ಬಂಧವಿಲ್ಲದ್ದರಿಂದ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲ್ಗಳ ಬಳಕೆ ಯಥೇಚ್ಛವಾಗಿದ್ದು ಬಳಸಿದ ಪ್ಲಾಸ್ಟಿಕ್ ನೀರಿನ ಬಾಟಲುಗಳು ಎಲ್ಲೆಂದರಲ್ಲಿ ಎಸೆಯಲ್ಪಡುವುದರಿಂದ ಘನ ತ್ಯಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಸೇರಿ ಹಲವಾರು ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುವುದರ ಜೊತೆಗೆ, ನಗರ ಪ್ರದೇಶಗಳಲ್ಲಿ ಅಹಿತಕರ ದೃಶ್ಯ ಸೃಷ್ಟಿಯಾಗುತ್ತಿರುತ್ತದೆ ಎಂದು ಉಲ್ಲೇಖಿಸಲಾಗಿತ್ತು.
ಇದಲ್ಲದೆ, ಸರ್ಕಾರದ ಸಭೆ/ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸರಬರಾಜಾಗುವ ನೀರು ಹಲವಾರು ಸಂದರ್ಭಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಾತ್ರ ಬಳಕೆಯಾಗಿ ಹೆಚ್ಚಿನ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ ಮತ್ತು ಇಂತಹ ನೀರಿನ ಬಾಟಲಿಗಳನ್ನು ಖರೀದಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ದುಬಾರಿ ಆಗುತ್ತಿರುತ್ತದೆ ಎಂದು ಹೇಳಲಾಗಿತ್ತು.
ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸಂಸ್ಥೆಗಳಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳಲ್ಲಿ (Single use packaged water bottles) ಪ್ಯಾಕ್ ಮಾಡಿದ ನೀರು ಸರಬರಾಜು/ ಬಳಕೆ ಮಾಡುವುದನ್ನು ನಿಷೇಧಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡುವುದನ್ನು ಉತ್ತೇಜಿಸುವುದು ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿತ್ತು.
* ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ/ ಸಮಾರಂಭ, ಕಾರ್ಯಾಗಾರ, ಸೆಮಿನಾರ್, ಇತ್ಯಾದಿಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಏರ್ಪಡಿಸತಕ್ಕದ್ದು.
* ಕಚೇರಿಗಳಲ್ಲಿ ಸಾಮಾನ್ಯವಾಗಿ ಆಗಾಗ್ಗೆ ಸಭೆ/ ಸಮಾರಂಭಗಳು ಏರ್ಪಡುವ ಸಮಿತಿ ಕೊಠಡಿಗಳು, ಕಾನ್ಫರೆನ್ಸ್ ಹಾಲ್ಗಳು ಇತ್ಯಾದಿ ಸಭಾಂಗಣಗಳಲ್ಲಿ ಕೇಂದ್ರ ಸರ್ಕಾರದ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಅಥವಾ ರಾಜ್ಯ ಸರ್ಕಾರದಿಂದ ಅಂಗೀಕರಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ RO ಮತ್ತು ನೀರು ಶುದ್ದೀಕರಣ ಘಟಕಗಳನ್ನು ಅನುಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವುದಕ್ಕೆ ವ್ಯವಸ್ಥೆ ಮಾಡುವುದು.
* ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರು ಸರಬರಾಜಿಗಾಗಿ ಕೇಂದ್ರ ಸರ್ಕಾರದ ಜಾಲತಾಣ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ RO ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾಪನೆಗೊಳಿಸುವುದು ಎಂದು ಹೇಳಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications