ಕರ್ನಾಟಕದ ಎಲ್ಲ ಆರೋಗ್ಯ ಕೇಂದ್ರಗಳು ಏಕಬಳಕೆ ಪ್ಲಾಸ್ಟಿಕ್ ಮುಕ್ತ ಪ್ರದೇಶ
ಕರ್ನಾಟಕ ರಾಜ್ಯದ ಪ್ರತಿ ಆರೋಗ್ಯ ಕೇಂದ್ರಗಳಲ್ಲೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಬೆಂಗಳೂರು, ಫೆಬ್ರವರಿ 15: ಕರ್ನಾಟಕ ರಾಜ್ಯದ ಪ್ರತಿ ಆರೋಗ್ಯ ಕೇಂದ್ರಗಳಲ್ಲೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಉತ್ತಮ ಪರಿಸರಕ್ಕೆ ನೆರವಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇಳಿಕೊಂಡಿದ್ದಾರೆ.
ಪ್ಲಾಸ್ಟಿಕ್ ಉತ್ಪನ್ನಗಳನ್ನು ದಿನನಿತ್ಯ ಬಳಕೆ ಮಾಡುವುದರಿಂದ ಮನುಷ್ಯರಿಗಷ್ಟೇ ಅಲ್ಲದೇ ಪರಿಸರ, ಪ್ರಾಣಿಗಳ ಮೇಲೂ ಹಾನಿ ಉಂಟಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ವೇಸ್ಟ್ (ಮ್ಯಾನೇಜ್ಮೆಂಟ್ ಮತ್ತು ಹ್ಯಾಡ್ಲಿಂಗ್) 2011 ಹಾಗೂ ತಿದ್ದುಪಡಿ ನಿಯಮ 2016ರ ಪ್ರಕಾರ 'ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ' ಮೇಲೆ ಹೆಚ್ಚು ನಿರ್ಬಂಧ ವಿಧಿಸಿದೆ. ಇದರನ್ವಯ ಕರ್ನಾಟಕ ಸರ್ಕಾರ ಪ್ಲಾಸ್ಟಿಕ್ ಬ್ಯಾಗ್ ಮತ್ತಿತರೆ ಉತ್ಪನ್ನಗಳ ಬಳಕೆಯನ್ನು ನಿರ್ಬಂಧಿಸಿ 2016ರ ಮಾರ್ಚ್ 11 ರಂದು ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸು ವನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ 23ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್ ಸೇರಿ ಇನ್ನಿತರ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಇದೇ ತಿಂಗಳ ಪೆ.1 ರಿಂದಲೇ ರಾಜ್ಯದ ಪ್ರತಿಯೊಂದು ಆರೋಗ್ಯ ಕೇಂದ್ರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಚೇರಿಯ ಒಳಗೆ, ಆವರಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತರದಂತೆ ಕ್ರಮವಹಿಸಲಾಗುತ್ತಿದೆ. ಕೇಂದ್ರಗಳಲ್ಲಿ ನಾಮಫಲಕ ಅಳವಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇನ್ನೂ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಆರೋಗ್ಯ ಸೇವೆ ಕುರಿತು ಸಂಬಂಧಪಟ್ಟ ವೆಬ್ಸೈಟ್ಗಳಲ್ಲಿ ಈ ಬಗ್ಗೆ ಮಾಹಿತಿ ಅಳವಡಿಸಲಾಗಿದೆ.
ಏಕ ಬಳಕೆಯ ಪ್ಲಾಸ್ಟಿಕ್ ಯಾವುದು?
ಏಕ ಬಳಕೆಯ ಪ್ಲಾಸ್ಟಿಕ್ ಯಾವವು ಎಂದು ನೋಡುವುದಾದರೆ, ಪ್ಲಾಸ್ಟಿಕ್ ಬಾಟಲ್, ಕವರ್, ಬ್ಯಾಗ್ ಇನ್ನಿತರ ಉತ್ಪನ್ನಗಳು. ಇಂತವುಗಳನ್ನು ಒಳತರದಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ತಿಳಿಸಬೇಕು. ಅದೇ ರೀತಿ ಕ್ಯಾಂಟೀನ್ಗಳಲ್ಲೂ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನ ಬಳಸದಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಜನರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡುತ್ತಿದೆ. ಇದರ ಅರಿವು ಎಲ್ಲಿಗೂ ಆಗಬೇಕು. ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಸರ್ಕಾರ ಸೂಚಿಸಿರುವ ಎಲ್ಲ ನಿಯಮ ಜನರು ಪಾಲಿಸಬೇಕು ಎಂದು ಅವರು ತಿಳಿಸಿದರು.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications