Get Updates
Get notified of breaking news, exclusive insights, and must-see stories!

ಉಪ ಚುನಾವಣೆ ಫಲಿತಾಂಶ: ಇದು ನೈತಿಕ ಮುನ್ನಡೆ ಅಲ್ಲ!

ಬೆಂಗಳೂರು, ನ. 10: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಫಲಿತಾಂಶ ಇನ್ನು ಕೆಲ ಹೊತ್ತಿನಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವಾಗಿದೆ. ಆದರೂ ಅಂತಿಮ ಫಲಿತಾಂಶ ಬರಬೇಕಿದೆ. ಈ ಮಧ್ಯೆ ಉಪ ಚುನಾವಣೆಯ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Recommended Video

      Sira ByElection Result : ಫಲಿತಾಂಶಕ್ಕೆ ಹೆದರಿ ಹೀಗಾಯಿತು!! | Oneindia Kannada

      ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ನೈತಿಕ ಮುನ್ನಡೆ ಅಲ್ಲ ಎಂದು ಈಶ್ವರ್ ಖಂಡ್ರೆ ಅವರು ಉಪ ಚುನಾವಣೆಯ ಫಲಿತಾಂಶದ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ಉಪ ಚುನಾವಣೆಯಲ್ಲಿ ಹಣಬಲ-ತೋಳ್ಬಲವನ್ನು ಉಪಯೋಗಿಸಲಾಗಿದೆ. ಜೊತೆಗೆ ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗವನ್ನು ಆಡಳಿತಾರೂಢ ಬಿಜೆಪಿ ಮಾಡಿಕೊಂಡಿದೆ.

      Sira RR Nagara By-election Result Is Not A Moral One: Kpcc President Eshwar Khandre

      ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಯಲು ಅವಕಾಶವನ್ನೇ ನೀಡಲಿಲ್ಲ. ಹೀಗಾಗಿ ಇದು ನೈತಿಕ ಮುನ್ನಡೆ ಅಲ್ಲ ಎಂದು ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ಎರಡು ಉಪ ಚುನಾವಣೆ ಸೇರಿದಂತೆ ಬಿಹಾರ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲುವುದಾಗಿ ಈಶ್ವರ್‌ ಖಂಡ್ರೆ ಈ ಮ ಒದಲು ಅಭಿಪ್ರಾಯ ವ್ಯಕ್ತಪಡಿಸಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+