ಶಿರಸಿ: ಬನವಾಸಿ ಕದಂಬೋತ್ಸವ ನೇರವಾಗಿ ಕಣ್ತುಂಬಿಕೊಳ್ಳಿ
ಶಿರಸಿ, ಫೆ. 8: ಪ್ರಸಿದ್ಧ ಕದಂಬೋತ್ಸವವನ್ನು ಈ ಬಾರಿ ನೇರ ಪ್ರಸಾರದಲ್ಲಿ ಕಣ್ಣು ತುಂಬಿಕೊಳ್ಳಲು ಅವಕಾಶ ಒದಗಿಸಲಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೇರವಾಗಿ ಕಣ್ಣು ತುಂಬಿಕೊಳ್ಳಬಹುದು.
ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ನಡೆಯುವ ನೃತ್ಯ, ಸಂಗೀತ ಕಾರ್ಯಕ್ರಮಗಳನ್ನು ಮನೆಯಲ್ಲೆ ಕುಳಿತು ನೋಡಿ ಆನಂದಿಸಬಹುದು. ಪಂಪ ಪ್ರಶಸ್ತಿ ಸ್ವೀಕಾರಕ್ಕೆ ಪ್ರೊ. ಜಿ.ವೆಂಕಟಸುಬ್ಬಯ್ಯ ಆಗಮಿಸದಿದ್ದರೂ ಪರದೆಯ ಮೇಲೆ ಭಾಷಣ ಮಾಡಿ ಕೊರತೆಯನ್ನು ತುಂಬಿದರು.(ನೇರ ಪ್ರಸಾರ ನೋಡಿ)
ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಶಿವರಾಮ್ ಹೆಬ್ಬಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತಿತರರು ಹಾಜರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆಗೆ ಆಗಮಿಸುತ್ತಾರೆ ಎಂಬ ನಿರೀಕ್ಷೆಯನ್ನು ಹುಸಿ ಮಾಡಿದರು. ಸಾಹಿತಿ ನಾ. ಡಿಸೋಜ ಸೇರಿದಂತೆ ಅನೇಕ ಗಣ್ಯರ ಹಾಜರಿ ಕಾರ್ಯಕ್ರಮಕ್ಕೆ ಹೊಸ ಮೆರಗು ತಂದಿತ್ತು.

ಉದ್ಘಾಟನೆ ನೆರವೇರಿಸಿದ ಗಣ್ಯರು
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಕದಂಬೋತ್ಸವದ ಉದ್ಘಾಟನೆ ನೆರವೇರಿಸದರು. ಶಾಸಕರಾದ ಶಿವರಾಂ ಹೆಬ್ಬಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತಿತರರು ಹಾಜರಿದ್ದರು.

ಹರಿದ ಸಂಗೀತ ಸುಧೆ
ಕದಂಬೋತ್ಸವದ ಪ್ರಯುಕ್ತ ಮಯೂರವರ್ಮ ವೇದಿಕೆಯಲ್ಲಿ ಗಾಯಕಿಯರಿಂದ ಹರಿದ ಸಂಗೀತ ಸುಧೆ ಪ್ರೇಕ್ಷಕರ ಮನ ತಣಿಸಿತು.

ಕಾಡಿದ ಸಿಎಂ ಅನುಪಸ್ಥಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಕದಂಬೋತ್ಸವ ಉದ್ಘಾಟನೆಗೆ ಆಗಮಿಸುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ನೀತಿ ಆಯೋಗದ ಸಭೆಗೆ ಹಾಜರಾಗಲು ಸಿಎಂ ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಸಚಿವರೇ ಕಾರ್ಯಕ್ರಮ ಉದ್ಘಾಟಿಸಿದರು.

ಪರದೆ ಮೇಲೆ ಕಾಣಿಸಿಕೊಂಡ ವೆಂಕಟಸುಬ್ಬಯ್ಯ
ಕೆಲ ಅನಿವಾರ್ಯ ಕಾರಣದಿಂದ ಪಂಪ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗದ ನಿಘಂಟು ತಜ್ಞ ವೆಂಕಟಸುಬ್ಬಯ್ಯ ಪರದೆಯ ಮೇಲೆ ಕಾಣಿಸಿಕೊಂಡು ಮಾತನಾಡಿದರು.
-
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications