ಗೌರಿ ಲಂಕೇಶ್ ಹಂತಕ ಕರ್ನಾಟಕ ಪೊಲೀಸರ ಸೆರೆಯಲ್ಲಿ?
Recommended Video

ಬೆಂಗಳೂರು, ಜೂನ್ 12: ಪತ್ರಕರ್ತೆ ಗೌರಿ ಲಂಕೇಶ್ ಹಂತಕ ಕರ್ನಾಟಕ ಪೊಲೀಸರ ವಿಶೇಷ ತನಿಖಾ ದಳದ ವಶದಲ್ಲಿದ್ದಾನಾ? ಈ ಅನುಮಾನಗಳಿಗೆ ಸ್ಪಷ್ಟ ಉತ್ತರ ಇಲ್ಲವಾದರೂ, ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿರಬಹುದಾದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಎಸ್ಐಟಿ ತಂಡ ಮಹಾರಾಷ್ಟ್ರದ ಪ್ರದೇಶವೊಂದರಿಂದ ಮರಾಠಿ ಮಾತನಾಡುವ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಈತನೇ ಗೌರಿ ಲಂಕೇಶ್ ಮೇಲೆ ಪ್ರತ್ಯಕ್ಷ ಗುಂಡು ಹಾರಿಸಿರಬಹುದು ಎಂಬ ಅನುಮಾನಗಳು ಕರ್ನಾಟಕ ಪೊಲೀಸರನ್ನು ಕಾಡುತ್ತಿದೆ.
ಬಂಧಿತ ವ್ಯಕ್ತಿ 30ರ ಆಸುಪಾಸಿನವನಾಗಿದ್ದು, ಐದು ಅಡಿ ಒಂದಿಂಚು ಎತ್ತರ, 75-80 ಕೆಜಿ ತೂಕವಿದ್ದು ಮರಾಠಿ ಮಾತನಾಡುತ್ತಾನೆ ಎಂದು ಎಸ್ಐಟಿ ಮೂಲಗಳು ಹೇಳಿವೆ. ಈತನ ಬಳಿಯಲ್ಲಿ ಯಾವುದೇ ಪಿಸ್ತೂಲ್ ಆಗಿ ಮಾರಕಾಸ್ತ್ರಗಳಾಗಲಿ ಸಿಕ್ಕಿಲ್ಲ. ಯಾವುದೇ ಪ್ರತಿಕ್ರಿಯೆ ನೀಡುವುದಕ್ಕೂ ಮುನ್ನ ನಾವು ಈತನನ್ನು ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಈ ಸಂಬಂಧ ಈ ಹಿಂದೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವರದಿ ನೀಡಿದ್ದ ವಿಧಿ ವಿಜ್ಞಾನ ಪ್ರಯೋಗಾಲಯ, ಹಂತಕನ ಎತ್ತರ 5 ಅಡಿ 1 ಇಂಚು ಅಥವಾ 2 ಇಂಚು ಮತ್ತು ತೂಕ 70-80 ಕೆಜಿ ಎಂದು ಹೇಳಿತ್ತು. ಈ ಸಿಸಿಟಿವಿ ದೃಶ್ಯಾವಳಿ ಮತ್ತು ತನಿಖೆ ವೇಳೆ ದೊರೆತ ಇತರ ಮಾಹಿತಿಗಳನ್ನು ಕೆಲ ಹಾಕಿ ಎಸ್ಐಟಿ ಶಂಕಿತರ ನಾಲ್ಕು ಚಿತ್ರಗಳನ್ನೂ ರಚಿಸಿದೆ. ಇದರಲ್ಲಿ ಗುಂಡು ಹಾರಿಸಿದ ಹಂತಕನ ರೇಖಾ ಚಿತ್ರವೂ ಇದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕೆ.ಟಿ. ನವೀನ್ ಕುಮಾರ್ ಗೆಳೆಯ ಶ್ರೀರಂಗಪಟ್ಟಣದ ಅನಿಲ್ ಕುಮಾರ್ ಸಹಾಯದಿಂದ ಈ ರೇಖಾಚಿತ್ರಗಳನ್ನು ರಚಿಸಲಾಗಿದೆ.
ಈಗಾಗಲೇ ಎಸ್ಐಟಿ ಅನಿಲ್ ಕುಮಾರ್ ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆತನ ಹೇಳಿಕೆಯನ್ನು ಸಾಕ್ಷಿಯಾಗಿ ಸ್ವೀಕರಿಸಿದೆ. ಎಸ್ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ಪ್ರಕಾರ, ಕೆ.ಟಿ. ನವೀನ್ ಕುಮಾರ್ ಗೌರಿ ಲಂಕೇಶ್ ಹತ್ಯೆಗೆ ಪ್ರವೀಣ್ ಕುಮಾರ್ ಜೊತೆ ಸೇರಿ ಸಂಚು ರೂಪಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರವೀಣ್ ಕುಮಾರ್ ಅಲಿಯಾಸ್ ಸುಜಿತ್ ಕುಮಾರ್ ಮತ್ತೋರ್ವ ವಿಚಾರವಾದಿ ಕೆ.ಎಸ್. ಭಗವಾನ್ ಕೊಲೆಗೆ ನವೀನ್ ಸಹಾಯ ಕೇಳಿದ್ದ ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications