ಗೌರಿ ಲಂಕೇಶ್ ಹಂತಕ ಕರ್ನಾಟಕ ಪೊಲೀಸರ ಸೆರೆಯಲ್ಲಿ?
Recommended Video

ಬೆಂಗಳೂರು, ಜೂನ್ 12: ಪತ್ರಕರ್ತೆ ಗೌರಿ ಲಂಕೇಶ್ ಹಂತಕ ಕರ್ನಾಟಕ ಪೊಲೀಸರ ವಿಶೇಷ ತನಿಖಾ ದಳದ ವಶದಲ್ಲಿದ್ದಾನಾ? ಈ ಅನುಮಾನಗಳಿಗೆ ಸ್ಪಷ್ಟ ಉತ್ತರ ಇಲ್ಲವಾದರೂ, ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿರಬಹುದಾದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಎಸ್ಐಟಿ ತಂಡ ಮಹಾರಾಷ್ಟ್ರದ ಪ್ರದೇಶವೊಂದರಿಂದ ಮರಾಠಿ ಮಾತನಾಡುವ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಈತನೇ ಗೌರಿ ಲಂಕೇಶ್ ಮೇಲೆ ಪ್ರತ್ಯಕ್ಷ ಗುಂಡು ಹಾರಿಸಿರಬಹುದು ಎಂಬ ಅನುಮಾನಗಳು ಕರ್ನಾಟಕ ಪೊಲೀಸರನ್ನು ಕಾಡುತ್ತಿದೆ.
ಬಂಧಿತ ವ್ಯಕ್ತಿ 30ರ ಆಸುಪಾಸಿನವನಾಗಿದ್ದು, ಐದು ಅಡಿ ಒಂದಿಂಚು ಎತ್ತರ, 75-80 ಕೆಜಿ ತೂಕವಿದ್ದು ಮರಾಠಿ ಮಾತನಾಡುತ್ತಾನೆ ಎಂದು ಎಸ್ಐಟಿ ಮೂಲಗಳು ಹೇಳಿವೆ. ಈತನ ಬಳಿಯಲ್ಲಿ ಯಾವುದೇ ಪಿಸ್ತೂಲ್ ಆಗಿ ಮಾರಕಾಸ್ತ್ರಗಳಾಗಲಿ ಸಿಕ್ಕಿಲ್ಲ. ಯಾವುದೇ ಪ್ರತಿಕ್ರಿಯೆ ನೀಡುವುದಕ್ಕೂ ಮುನ್ನ ನಾವು ಈತನನ್ನು ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಈ ಸಂಬಂಧ ಈ ಹಿಂದೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವರದಿ ನೀಡಿದ್ದ ವಿಧಿ ವಿಜ್ಞಾನ ಪ್ರಯೋಗಾಲಯ, ಹಂತಕನ ಎತ್ತರ 5 ಅಡಿ 1 ಇಂಚು ಅಥವಾ 2 ಇಂಚು ಮತ್ತು ತೂಕ 70-80 ಕೆಜಿ ಎಂದು ಹೇಳಿತ್ತು. ಈ ಸಿಸಿಟಿವಿ ದೃಶ್ಯಾವಳಿ ಮತ್ತು ತನಿಖೆ ವೇಳೆ ದೊರೆತ ಇತರ ಮಾಹಿತಿಗಳನ್ನು ಕೆಲ ಹಾಕಿ ಎಸ್ಐಟಿ ಶಂಕಿತರ ನಾಲ್ಕು ಚಿತ್ರಗಳನ್ನೂ ರಚಿಸಿದೆ. ಇದರಲ್ಲಿ ಗುಂಡು ಹಾರಿಸಿದ ಹಂತಕನ ರೇಖಾ ಚಿತ್ರವೂ ಇದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕೆ.ಟಿ. ನವೀನ್ ಕುಮಾರ್ ಗೆಳೆಯ ಶ್ರೀರಂಗಪಟ್ಟಣದ ಅನಿಲ್ ಕುಮಾರ್ ಸಹಾಯದಿಂದ ಈ ರೇಖಾಚಿತ್ರಗಳನ್ನು ರಚಿಸಲಾಗಿದೆ.
ಈಗಾಗಲೇ ಎಸ್ಐಟಿ ಅನಿಲ್ ಕುಮಾರ್ ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆತನ ಹೇಳಿಕೆಯನ್ನು ಸಾಕ್ಷಿಯಾಗಿ ಸ್ವೀಕರಿಸಿದೆ. ಎಸ್ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ಪ್ರಕಾರ, ಕೆ.ಟಿ. ನವೀನ್ ಕುಮಾರ್ ಗೌರಿ ಲಂಕೇಶ್ ಹತ್ಯೆಗೆ ಪ್ರವೀಣ್ ಕುಮಾರ್ ಜೊತೆ ಸೇರಿ ಸಂಚು ರೂಪಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರವೀಣ್ ಕುಮಾರ್ ಅಲಿಯಾಸ್ ಸುಜಿತ್ ಕುಮಾರ್ ಮತ್ತೋರ್ವ ವಿಚಾರವಾದಿ ಕೆ.ಎಸ್. ಭಗವಾನ್ ಕೊಲೆಗೆ ನವೀನ್ ಸಹಾಯ ಕೇಳಿದ್ದ ಎನ್ನಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications