SIT Helpline: ಪ್ರಜ್ವಲ್ ರೇವಣ್ಣ ಕೇಸ್: ಸಂತ್ರಸ್ತರಿಗಾಗಿ 'ಸಹಾಯವಾಣಿ' ತೆರೆದ ಎಸ್ಐಟಿ
ಬೆಂಗಳೂರು, ಮೇ 05: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತನಿಖೆ ನಡೆಸುತ್ತಿರುವ ಎಸ್ಐಟಿ 'ಸಹಾಯವಾಣಿ' ಆರಂಭಿಸಿದೆ.
ಹೌದು, ಸುಮಾರು 3000 ಅಶ್ಲೀಲ ವಿಡಿಯೋಗಳು/ಫೋಟೋಗಳು ಇವೆ ಎಂದು ಹೇಳಲಾಗುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ.

ಲೈಂಗಿಕ ದೌರ್ಜನ್ಯ, ಬೆದರಿಕೆ, ಅತ್ಯಾಚಾರ, ಅಪಹರಣ ಕುರಿತು ದೂರು ದಾಖಲಾಗಿದೆ. ಇದೇ ರೀತಿ ಹಲವು ಮಹಿಳೆಯರಿಗೆ ತೊಂದರೆ ಆಗಿರುವ ಸಾಧ್ಯತೆ ಇರುವ ಕಾರಣ ಎಸ್ಐಟಿ ಅಧಿಕಾರಿಗಳು ಸಹಾಯವಾಣಿ (ಸಂಖ್ಯೆ-6360938947) ಆರಂಭಿಸಿದ್ದಾರೆ.
ಸಂತ್ರಸ್ತೆಯರ ನೆರವಿಗೆ ಎಸ್ಐಟಿ
ಮರಿಯಾದೆಗೆ ಅಂಜಿ, ಇಲ್ಲವೇ ಪ್ರಭಾವಿ ನಾಯಕರನ್ನು ಎದುರು ಹಾಕಿಕೊಳ್ಳಲು ಭಯಪಟ್ಟು ದೂರು ನೀಡಲು ಹಿಂಜರಿಯುವ ಸಂತ್ರಸ್ತರಿಗೆ ಈ ಸಹಾಯವಾಣಿ ಅನುಕೂಲವಾಗಲಿದೆ. ಈ ಕಾರಣಕ್ಕೆ ಎಸ್ಐಟಿ 'ಸಹಾಯವಾಣಿ' ಆರಂಭಿಸಿರುವುದಾಗಿ ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತಂತೆ ಎಸ್ಐಟಿ ರಚನೆ ಆಗಿದೆ. ಇದೀಗ ಸಂತ್ರಸ್ತೆಯರ ನೆರವಿಗೆ ಬಂಧಿರುವ ಎಸ್ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು, ಇಲ್ಲವೇ ಸಂಬಂಧಿಸಿದ ವ್ಯಕ್ತಿಗಳು ಈ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು.
ಕರೆ ಮಾಡಿ ಎಸ್ಐಟಿಗೆ ದೂರು ನೀಡಿದವರ ಹೆಸರು, ಇನ್ನಿತರ ಮಾಹಿತಿಯಲ್ಲಿ ಗೌಪ್ಯತೆ ಕಾಪಾಡಿಕೊಳ್ಳಲಾಗುವುದು. ಸಂತ್ರಸ್ತರು ನೀವು ಯಾರಿಗೂ ಭಯಪಡಬೇಕಿಲ್ಲ. ನಿಮಗೆ ರಕ್ಷಣೆ ಕೊಡುವುದು ಹಾಗೂ ನಿಮಗೆ ಸಹಾಯಕ್ಕೆ ಬರಲಾಗುವುದು ಎಂದು ಬಿಕೆ ಸಿಂಗ್ ತಿಳಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications