ನಾಗರಮಡಿ ಜಲಪಾತದಲ್ಲಿ ಕೊಚ್ಚಿಹೋಗಿದ್ದ 6 ಜನರಲ್ಲಿ ಐವರ ಶವ ಪತ್ತೆ
ಕಾರವಾರ, ಸೆಪ್ಟೆಂಬರ್ 18: ಇಲ್ಲಿನ ನಾಗರಮಡಿ ಜಲಪಾತದಲ್ಲಿ ಭಾನುವಾರ ಕೊಚ್ಚಿ ಹೋಗಿದ್ದ ಗೋವಾ ಮೂಲದ ಪ್ರವಾಸಿಗರಲ್ಲಿ ಐವರು ಶವ ದೊರೆತಿದೆ. ಒಟ್ಟು ಆರು ಜನ ಪ್ರವಾಸಿಗರು ಕೊಚ್ಚಿ ಹೋಗಿದ್ದು ಇನ್ನೊಬ್ಬರ ಶವ ಇನ್ನೂ ದೊರೆತಿಲ್ಲ.
ಭಾನುವಾರ ಬೆಳಿಗ್ಗೆ ಚೆಂಡಿಯಾ ಗ್ರಾಮದ ನಾಗರಮಡಿ ಜಲಪಾತಕ್ಕೆ ಗೋವಾದ ಮಡಗಾಂವ್ ರಾಯ್ ನ 50ಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ಇವರಲ್ಲಿ ಆರು ಜನ ಜಲಪಾತದ ಕೊಳದಲ್ಲಿ ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು. ಈ ವೇಳೆ ಜಲಪಾತದ ತುದಿಯಿಂದ ಏಕಾಏಕಿ ರಭಸವಾಗಿ ನೀರು ನುಗ್ಗಿದ್ದರಿಂದ ಕೊಚ್ಚಿ ಹೋಗಿದ್ದರು.

ನೀರಿನಲ್ಲಿ ಕೊಚ್ಚಿಹೋಗಿದ್ದ ಗೋವಾ ಮೂಲದ ಆರು ಜನ ಪ್ರವಾಸಿಗರಲ್ಲಿ ಭಾನುವಾರ ಫ್ರಾನ್ಸಿಲಾ ಪೀರಿಸ್ ಮತ್ತು ಫಿಯಾನೊ ಪಚಗಾವೋ ಎಂಬುವವರ ಶವ ದೊರೆತಿತ್ತು. ಇದೀಗ ಸೋಮವಾರ ಪೊಂಡಾದ ಸಮೀರ್ ಗಾವಡೆ (28), ವಾಸ್ಕೋದ ಸಿದ್ದು ಚೆರಿ (21), ಮಾರ್ಸಲೀನ ಮೆಕ್ಸಿಕಾ (38)ರ ಮೃತದೇಹ ಸಿಕ್ಕಿದೆ.
ಹೀಗೆ ಆರರಲ್ಲಿ ಐದು ಜನರ ಮೃತದೇಹ ಸಿಕ್ಕಿದ್ದು ರೇಣುಕಾ ಎಂಬುವರ ಶವ ದೊರಕಬೇಕಿದ್ದು ಶೋಧ ಕಾರ್ಯ ಮುಂದುವರೆದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು, ಸ್ಥಳೀಯ ಈಜುಗಾರರು ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications