ತೇಜಸ್ ಮಾದರಿ ರೈಲಿನ 6 ಕಾರಿಡಾರ್; ಕರ್ನಾಟಕದ ಒಂದು ರೈಲು
ಬೆಂಗಳೂರು, ಫೆಬ್ರವರಿ 01 : "ತೇಜಸ್ ಮಾದರಿಯ ನೂತನ ರೈಲುಗಳನ್ನು ಪರಿಚಯಿಸಲಾಗುತ್ತದೆ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಚೆನ್ನೈ-ಬೆಂಗಳೂರು-ಮೈಸೂರು ನಡುವಿನ ರೈಲು ಸಹ ಇದರಲ್ಲಿ ಸೇರಿದೆ.
ಶನಿವಾರ 2020ನೇ ಸಾಲಿನ ಬಜೆಟ್ ಮಂಡನೆ ಮಾಡಲಾಯಿತು. ಪ್ರತ್ಯೇಕ ರೈಲ್ವೆ ಬಜೆಟ್ ಮಂಡನೆ ಮಾಡುವ ಸಂಪ್ರದಾಯವನ್ನು ನಿಲ್ಲಿಸಲಾಗಿದ್ದು, ಮುಖ್ಯ ಬಜೆಟ್ನಲ್ಲಿಯೇ ರೈಲ್ವೆಯನ್ನು ಸೇರಿಸಿಕೊಳ್ಳಲಾಗಿದೆ. ಬಜೆಟ್ನಲ್ಲಿ ರೈಲ್ವೆ ಇಲಾಖೆಗೂ ಹಲವು ಕೊಡುಗೆಗಳನ್ನು ನೀಡಲಾಗಿದೆ.
" ಬೆಂಗಳೂರು ನಗರಕ್ಕೆ ಸಬ್ ಅರ್ಬನ್ ರೈಲು, ಪ್ರವಾಸಿ ಸ್ಥಳಗಳನ್ನು ಸಂಪರ್ಕಿಸಲು ತೇಜಸ್ ಮಾದರಿಯ ರೈಲುಗಳನ್ನು ಪರಿಚಯಿಸಲಾಗುತ್ತದೆ" ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ಬುಲೆಟ್ ರೈಲು ಯೋಜನೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಬಜೆಟ್ನಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 14, 2017ರಲ್ಲಿ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗೆ ಶಂಕು ಸ್ಥಾಪನೆ ಮಾಡಲಾಗಿದೆ.
ಗಂಟೆಗೆ 350 ಕಿ. ಮೀ. ವೇಗದಲ್ಲಿ ಬುಲೆಟ್ ರೈಲು ಸಂಚಾರ ನಡೆಸಲಿದೆ. ಅಹಮದಾಬಾದ್-ಮುಂಬೈ ನಡುವಿನ 508 ಕಿ. ಮೀ.ಯನ್ನು ರೈಲು ಎರಡು ಗಂಟೆಗಳಲ್ಲಿ ಕ್ರಮಿಸಲಿದೆ. ಜಪಾನ್ ಜೊತೆಯಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ರೈಲ್ವೆ ಇಲಾಖೆ ಹೈಸ್ಪೀಡ್ ಮತ್ತು ಸೆಮಿ ಹೈಸ್ಪೀಡ್ ಕಾರಿಡಾರ್ಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಇದಕ್ಕಾಗಿ ಆರು ಮಾರ್ಗಗಳನ್ನು ಗುರುತಿಸಲಾಗಿದೆ. ಇದರಲ್ಲಿ ಚೆನ್ನೈ-ಬೆಂಗಳೂರು-ಮೈಸೂರು (435 ಕಿ. ಮೀ.) ಮಾರ್ಗವೂ ಸೇರಿದೆ.
ಆರು ಕಾರಿಡಾರ್ಗಳು
* ದೆಹಲಿ-ನೋಯ್ಡಾ-ಆಗ್ರಾ-ಲಕ್ನೋ-ವಾರಣಾಸಿ (865 ಕಿ. ಮೀ)
* ದೆಹಲಿ-ಜೈಪುರ-ಉದಯ್ಪುರ-ಅಹಮದಾಬಾದ್ (886 ಕಿ. ಮೀ)
* ಮುಂಬೈ-ನಾಸಿಕ್-ನಾಗ್ಪುರ (753 ಕಿ. ಮೀ)
* ಮುಂಬೈ-ಪುಣೆ-ಹೈದರಾಬಾದ್ (711 ಕಿ. ಮೀ)
* ಚೆನ್ನೈ-ಬೆಂಗಳೂರು-ಮೈಸೂರು (435 ಕಿ. ಮೀ)
* ದೆಹಲಿ-ಚಂಡೀಗಢ-ಲೂಧಿಯಾನ-ಜಲಂಧರ್-ಅಮೃತಸರ (459 ಕಿ.ಮೀ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications