ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಫೆಬ್ರವರಿ 11 : ಪ್ರತಿಷ್ಠಿತ ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಸರ್ಕಾರ 6 ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿಯನ್ನು ನೀಡಲಾಗುತ್ತದೆ. 2017 ಮತ್ತು 2018ನೇ ಸಾಲಿನ ಪ್ರಶಸ್ತಿಗಳ ಆಯ್ಕೆಗೆ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಕೆಪಿ ನಂಜುಂಡಿ ಒಡೆತನದ ಟಿವಿ1 ಸುದ್ದಿ ವಾಹಿನಿ ಬಾಗಿಲು ಬಂದ್!ಕೆಪಿ ನಂಜುಂಡಿ ಒಡೆತನದ ಟಿವಿ1 ಸುದ್ದಿ ವಾಹಿನಿ ಬಾಗಿಲು ಬಂದ್!

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ 6 ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿದೆ. ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಎಚ್.ಆರ್.ಶ್ರೀಶ, ಬೆಲಗೂರು ಸಮೀವುಲ್ಲಾ, ಪಿ.ತ್ಯಾಗರಾಜ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.

2018ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳು ಘೋಷಣೆ2018ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳು ಘೋಷಣೆ

vidhana soudha

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.
ಇಲಾಖೆಯ ನಿರ್ದೇಶಕ ಎಂ. ರವಿಕುಮಾರ್ ಅವರು ಈ ಪ್ರಶಸ್ತಿಗಳಿಗೆ ಅರ್ಹರ ಹೆಸರುಗಳನ್ನು ಸಲಹೆ ನೀಡುವಂತೆ ಮಾಧ್ಯಮ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ.

ಮೀನು ಸೇವಿಸಿ ದೇವಾಲಯಕ್ಕೆ ಹೋದೆ ಎಂದರು! ಮಾಧ್ಯಮಕ್ಕೆ ಸಿದ್ದು ಪಂಚ್ಮೀನು ಸೇವಿಸಿ ದೇವಾಲಯಕ್ಕೆ ಹೋದೆ ಎಂದರು! ಮಾಧ್ಯಮಕ್ಕೆ ಸಿದ್ದು ಪಂಚ್

ಹಿರಿಯ ಪತ್ರಕರ್ತರ ಗೆಳೆಯರೂ ಕೂಡಾ ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿಗಳ ಹೆಸರು ಮತ್ತು ಅವರ ವ್ಯಕ್ತಿಚಿತ್ರಗಳನ್ನು ಇಲಾಖಾ ನಿರ್ದೇಶಕರಿಗೆ ನೇರವಾಗಿ ಕಳುಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

English summary
Karnataka government has constituted a six-member committee under the Chairmanship of Justice D.V.Shylendra Kumar retired Judge of the High Court of Karnataka for the selection of journalists for the prestigious T S Ramachandra Rao Award and Mohare Hanamantharaya award for the calendar year 2017 and 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X