ತೌಕ್ತೆ ಅಬ್ಬರ; ಕರ್ನಾಟಕದಲ್ಲಿ 6 ಸಾವು, 121 ಗ್ರಾಮಗಳಲ್ಲಿ ಹಾನಿ
ಬೆಂಗಳೂರು, ಮೇ 18; ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಕಡಿಮೆಯಾಗಿದೆ. ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ 121 ಗ್ರಾಮಗಳಲ್ಲಿ ಹಾನಿಯಾಗಿದ್ದು, 6 ಜನರು ಮೃತಪಟ್ಟಿದ್ದಾರೆ.
ತೌಕ್ತೆ ಚಂಡಮಾರುತದ ಅಬ್ಬರದಿದಾಗಿ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ರಾಜ್ಯದಲ್ಲಿ ಆಗಿರುವ ಹಾನಿಯ ವಿವರಗಳನ್ನು ನೀಡಿದೆ.
ಸೋಮವಾರ ಸಂಜೆಯ ತನಕ 121 ಹಳ್ಳಿಗಳಲ್ಲಿ ಚಂಡಮಾರುತದಿಂದಾಗಿ ಹಾನಿಯಾಗಿದೆ. ಇದುವರೆಗೂ 547 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 290 ಜನರು ಇನ್ನೂ ಸಹ 13 ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಪಡೆದಿದ್ದಾರೆ.

333 ಮನೆ, 644 ವಿದ್ಯುತ್ ಕಂಬ, 147 ಟ್ರಾನ್ಸ್ಫರ್ಮರ್, 3,0004.3 ಮೀಟರ್ ಲೈನ್, 57 ಕಿ. ಮೀ. ರಸ್ತೆ, 104 ದೋಣಿಗಳಿಗೆ ಇದುವರೆಗೂ ಹಾನಿಯಾಗಿದೆ. 30 ಹೆಕ್ಟೇರ್ ಕೃಷಿ ಬೆಳೆಗಳು, 2.87 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಯಾವ-ಯಾವ ಜಿಲ್ಲೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚಂಡಮಾರುತದಿಂದ ಹಾನಿಯಾಗಿದೆ.
ಸೋಮವಾರ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ಕಡೆಗೆ ಸಾಗಿದ್ದರಿಂದ ಕರ್ನಾಟಕದಲ್ಲಿ ಹಾನಿಯ ಪ್ರಮಾಣ ಕಡಿಮೆಯಾಗಿದೆ. ಮಂಗಳೂರಿನಲ್ಲಿ ಟಗ್ನಲ್ಲಿ ಸಿಲುಕಿದ್ದ 9 ಸಿಬ್ಬಂದಿಯನ್ನು ಸೋಮವಾರ ರಕ್ಷಣೆ ಮಾಡಲಾಗಿದೆ.
ನೌಕಾಪಡೆ ಟಗ್ನಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ" ಎಂದು ಅವರು ಹೇಳಿದ್ದಾರೆ.
-
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications