ಖಾಸಗಿ ಸಹಭಾಗಿತ್ವದಲ್ಲಿ 6 ಬಂದರು ಅಭಿವೃದ್ಧಿ
ಬೆಂಗಳೂರು, ನ. 18 : ಉತ್ತರ ಕನ್ನಡದ ಬೇಲೆಕೇರಿ ಸೇರಿದಂತೆ ಆರು ಬಂದರುಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಬೇಲೆಕೇರಿ ಸೇರಿದಂತೆ ಐದು ಬಂದರುಗಳನ್ನು ಅಭಿವೃದ್ಧಿಗೊಳಿಸಲು ಖಾಸಗಿಯವರು ಆಸಕ್ತಿ ತೋರಿದ್ದು, ಇನ್ನೆರಡು ತಿಂಗಳಲ್ಲಿ ಈ ಬಗ್ಗೆ ಅಂತಿಮ ಆದೇಶ ಹೊರಬೀಳಲಿದೆ.
ಜವಳಿ ಮತ್ತು ಬಂದರು ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದು, ಮಲ್ಪೆ, ಮಂಕಿ, ಪಾವಿನಕುರ್ವೆ, ಬೇಲೆಕೇರಿ, ತದಡಿ ಮತ್ತು ಹೊನ್ನಾವರ ಬಂದರುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಬೇಲೆಕೇರಿ ಬಂದರನ್ನು ದೆಹಲಿ ಮೂಲದ ಆಶ್ರಯ ಪೋರ್ಟ್ಗೆ ವಹಿಸಲಾಗುವುದು. ಈಗಾಗಲೇ ಕಂಪನಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಂಕಿ ಬಂದರು ಅಭಿವೃದ್ಧಿ ಹೊಣೆಯನ್ನು ರೇಣುಕಾ ಶುಗರ್ ಮತ್ತು ಹೊನ್ನಾವರ ಬಂದರು ಅಭಿವೃದ್ಧಿ ಕೆಲಸವನ್ನು ಆಂಧ್ರಪ್ರದೇಶ ಮೂಲದ ಕಂಪನಿಯೊಂದಕ್ಕೆ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದರು. [ಬೇಲೇಕೇರಿ ಅಕ್ರಮ ಅದಿರು ಸಾಗಣೆ]
ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 30 ವರ್ಷಗಳ ಅವಧಿಗೆ ಲೀಸ್ ಆಧಾರದ ಮೇಲೆ ಈ ಬಂದರುಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಅಭಿವೃದ್ಧಿಗೆ ಬೇಕಾದ ಪೂರ್ಣ ವೆಚ್ಚವನ್ನು ಅವರು ಭರಿಸುತ್ತಾರೆ. ಬಂದರು ಮೂಲಕ ಆಗುವ ವಹಿವಾಟಿನಲ್ಲಿ ಒಂದಷ್ಟು ಮೊತ್ತ ಸರ್ಕಾರಕ್ಕೆ ಪಾವತಿಸುತ್ತಾರೆ ಎಂದು ವಿವರಣೆ ನೀಡಿದರು.
ಬಂದರಿನ ವಹಿವಾಟು ನಿಯಂತ್ರಣ ಸರ್ಕಾರದ ಕೈಯಲ್ಲಿರುತ್ತದೆ. ಖಾಸಗಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಈ ಎಲ್ಲಾ ಅಂಶಗಳನ್ನು ಅಂತಿಮಗೊಳಿಸಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಈ ಯೋಜನೆ ತಯಾರಿಸಲಾಗಿದೆ. ಮೂರು ಬಂದರುಗಳನ್ನು ವಹಿಸಿಕೊಳ್ಳಲು ಕಂಪನಿಗಳು ಮುಂದೆ ಬಂದಿದ್ದು, ಇನ್ನೂ ಮೂರು ಬಂದರುಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications