ಖಾಸಗಿ ಸಹಭಾಗಿತ್ವದಲ್ಲಿ 6 ಬಂದರು ಅಭಿವೃದ್ಧಿ
ಬೆಂಗಳೂರು, ನ. 18 : ಉತ್ತರ ಕನ್ನಡದ ಬೇಲೆಕೇರಿ ಸೇರಿದಂತೆ ಆರು ಬಂದರುಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಬೇಲೆಕೇರಿ ಸೇರಿದಂತೆ ಐದು ಬಂದರುಗಳನ್ನು ಅಭಿವೃದ್ಧಿಗೊಳಿಸಲು ಖಾಸಗಿಯವರು ಆಸಕ್ತಿ ತೋರಿದ್ದು, ಇನ್ನೆರಡು ತಿಂಗಳಲ್ಲಿ ಈ ಬಗ್ಗೆ ಅಂತಿಮ ಆದೇಶ ಹೊರಬೀಳಲಿದೆ.
ಜವಳಿ ಮತ್ತು ಬಂದರು ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದು, ಮಲ್ಪೆ, ಮಂಕಿ, ಪಾವಿನಕುರ್ವೆ, ಬೇಲೆಕೇರಿ, ತದಡಿ ಮತ್ತು ಹೊನ್ನಾವರ ಬಂದರುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಬೇಲೆಕೇರಿ ಬಂದರನ್ನು ದೆಹಲಿ ಮೂಲದ ಆಶ್ರಯ ಪೋರ್ಟ್ಗೆ ವಹಿಸಲಾಗುವುದು. ಈಗಾಗಲೇ ಕಂಪನಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಂಕಿ ಬಂದರು ಅಭಿವೃದ್ಧಿ ಹೊಣೆಯನ್ನು ರೇಣುಕಾ ಶುಗರ್ ಮತ್ತು ಹೊನ್ನಾವರ ಬಂದರು ಅಭಿವೃದ್ಧಿ ಕೆಲಸವನ್ನು ಆಂಧ್ರಪ್ರದೇಶ ಮೂಲದ ಕಂಪನಿಯೊಂದಕ್ಕೆ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದರು. [ಬೇಲೇಕೇರಿ ಅಕ್ರಮ ಅದಿರು ಸಾಗಣೆ]
ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 30 ವರ್ಷಗಳ ಅವಧಿಗೆ ಲೀಸ್ ಆಧಾರದ ಮೇಲೆ ಈ ಬಂದರುಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಅಭಿವೃದ್ಧಿಗೆ ಬೇಕಾದ ಪೂರ್ಣ ವೆಚ್ಚವನ್ನು ಅವರು ಭರಿಸುತ್ತಾರೆ. ಬಂದರು ಮೂಲಕ ಆಗುವ ವಹಿವಾಟಿನಲ್ಲಿ ಒಂದಷ್ಟು ಮೊತ್ತ ಸರ್ಕಾರಕ್ಕೆ ಪಾವತಿಸುತ್ತಾರೆ ಎಂದು ವಿವರಣೆ ನೀಡಿದರು.
ಬಂದರಿನ ವಹಿವಾಟು ನಿಯಂತ್ರಣ ಸರ್ಕಾರದ ಕೈಯಲ್ಲಿರುತ್ತದೆ. ಖಾಸಗಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಈ ಎಲ್ಲಾ ಅಂಶಗಳನ್ನು ಅಂತಿಮಗೊಳಿಸಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಈ ಯೋಜನೆ ತಯಾರಿಸಲಾಗಿದೆ. ಮೂರು ಬಂದರುಗಳನ್ನು ವಹಿಸಿಕೊಳ್ಳಲು ಕಂಪನಿಗಳು ಮುಂದೆ ಬಂದಿದ್ದು, ಇನ್ನೂ ಮೂರು ಬಂದರುಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications