'ಕರ್ನಾಟಕ ಜರ್ಮನ್ ಬಹುಕೌಶಲ್ಯ ತರಬೇತಿ ಕೇಂದ್ರ'ದಿಂದ 4,000 ಮಂದಿಗೆ ಕೌಶಲ ತರಬೇತಿ: ಅಶ್ವಥ್ ನಾರಾಯಣ
ಬೆಳಗಾವಿ, ಡಿಸೆಂಬರ್ 28: ಕರ್ನಾಟಕದಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ 'ಕರ್ನಾಟಕ ಜರ್ಮನ್ ಬಹುಕೌಶಲ್ಯ ತರಬೇತಿ ಕೇಂದ್ರ' (ಕೆಜಿಟಿಟಿಐ)ದಿಂದ ಪ್ರತಿ ವರ್ಷ 4,000 ಯುವಜನರಿಗೆ ತರಬೇತಿ ನೀಡಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ತಿಳಿಸಿದರು.
ಬುಧವಾರ ಗುರುವಾರ ಬೆಳಗಾವಿಯಲ್ಲಿ ಒಟ್ಟು ಸುಮಾರು 15.5 ಕೋಟಿ ರೂಪಾಯಿ ವೆಚ್ಚದ 'ಕರ್ನಾಟಕ ಜರ್ಮನ್ ಬಹುಕೌಶಲ್ಯ ತರಬೇತಿ ಕೇಂದ್ರ' (ಕೆಜಿಟಿಟಿಐ) ಕಟ್ಟಡ ನಿರ್ಮಾಣಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಈ ಕೇಂದ್ರದಲ್ಲಿ 30ಕ್ಕೂ ಹೆಚ್ಚು ಕೋರ್ಸ್ ಗಳಿಗೆ ಸಂಬಂಧಿಸಿದಂತೆ ತರಬೇತಿ ಕೊಡಲಾಗುವುದು. ಈ ಕೋರ್ಸ್ಗಳು ಪ್ರವರ್ಧಮಾನಕ್ಕೆ ಬರುತ್ತಿರುವ ಎಲೆಕ್ಟ್ರಿಕ್ ವೆಹಿಕಲ್ಸ್, ವಾಹನ ತಾಂತ್ರಿಕತೆಯಂತಹ ವಿಷಯಗಳನ್ನು ಒಳಗೊಂಡಿರಲಿವೆ ಎಂದು ತಿಳಿಸಿದರು.

ತಯಾರಿಕಾ ಕ್ಷೇತ್ರವು ಇಂದು ಊಹೆಗೂ ನಿಲುಕುದಷ್ಟು ಮುಂದುವರೆದಿದೆ. ಅದಕ್ಕೆ ಅನುಗುಣವಾಗಿ ಈ ಕೇಂದ್ರದಲ್ಲಿ ಆತ್ಯಾಧುನಿಕ ರೀತಿಯಲ್ಲಿ ತರಬೇತಿ ನೀಡಲಾಗುವುದು. ಉದ್ಯೋಗ ಸೃಷ್ಟಿಯ ದೃಷ್ಟಿಯಿಂದ ಕರ್ನಾಟಕವು ಇಡೀ ಪ್ರಪಂಚದಲ್ಲೇ ಭರವಸೆಯ ತಾಣವಾಗಿದೆ. ಆದರೆ, ಇದರ ಲಾಭವು ನಮಗೆ ಸಿಗಬೇಕೆಂದರೆ ನಮ್ಮ ಯುವಕರು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇದನ್ನು ಗಮನದಲ್ಲಿರಿಸಿಕೊಂಡು ಇಂತಹ ಕೇಂದ್ರಗಳನ್ನು ಸರ್ಕಾರವು ಆದ್ಯತೆಯ ಮೇರೆಗೆ ಸ್ಥಾಪಿಸುತ್ತಿದೆ ಎಂದು ವಿವರಿಸಿದರು.
ಬೆಂಗಳೂರಿನ 2 ಕಂಪನಿಗಳಿಂದ ಹೆಚ್ಚು ವಹೀವಾಟು
ದೇಶಕ್ಕೆ ಕೈಗಾರಿಕಾ ಕ್ರಾಂತಿ ಮೊದಲು ಮೂರು (1, 2,3) ಕ್ರಾಂತಿಯ ಅವಕಾಶಗಳನ್ನು ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಈಗ ಕೈಗಾರಿಕಾ ಕ್ರಾಂತಿ 4.0ರ ಅವಕಾಶಗಳನ್ನು ನಾವು ಯಾವ ಕಾರಣಕ್ಕೂ ಕಳೆದುಕೊಳ್ಳಬಾರದು. ಕರ್ನಾಟಕವು ಅವಕಾಶಗಳ ತಾಣವಾಗಿದ್ದು, ಈ ಮೊದಲು ಮುಂಬೈ ದೇಶದ ಹಣಕಾಸು ರಾಜಧಾನಿಯಾಗಿತ್ತು.

ಸದ್ಯ ಬೆಂಗಳೂರಿನಲ್ಲಿರುವ ಎರಡೇ ಎರಡು ಆನ್ಲೈನ್ ಕಂಪನಿಗಳು ದೇಶದ ಶೇ. 50ರಷ್ಟು ಷೇರು ವಹಿವಾಟನ್ನು ನಿರ್ವಹಿಸುತ್ತಿವೆ. ಇನ್ನು ಐದು ವರ್ಷಗಳಲ್ಲಿ ರಾಜ್ಯದ ಫಿನ್ ಟೆಕ್ ಕಂಪನಿಗಳು ಆರ್ಥಿಕ ಚಟುವಟಿಕೆಗಳನ್ನು ನಿರ್ವಹಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದೇ ರೀತಿಯಾಗಿ, ಶಿಕ್ಷಣ ತಂತ್ರಜ್ಞಾನ ಮೆಡಿ ಟೆಕ್ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದರು.
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತಿತರರು ಇದ್ದರು. ಕೆಜಿಎಂಎಸ್ ಡಿಸಿ ಜಂಟಿ ಕಾರ್ಯದರ್ಶಿ ಬಿ.ಎಸ್ ರಘುಪತಿ ಸ್ವಾಗತಿಸಿದರು. ಕೆಜಿಟಿಟಿಐ ಬೆಳಗಾವಿ ನಿರ್ದೇಶಕ ಚಿದಾನಂದ ಬಾಕೆ ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications