Breaking; ಆಸ್ತಿ ಖರೀದಿದಾರರಿಗೆ ಸಿಹಿಸುದ್ದಿ ಕೊಟ್ಟ ಕರ್ನಾಟಕ ಸರ್ಕಾರ
ಬೆಂಗಳೂರು, ಏಪ್ರಿಲ್ 21; ಕರ್ನಾಟಕ ಸರ್ಕಾರ ಆಸ್ತಿ ಖರೀದಿ ಮಾಡುವವರಿಗೆ ಸಿಹಿಸುದ್ದಿ ನೀಡಿದೆ. ಮಾರ್ಗಸೂಚಿ ಬೆಲೆಯಲ್ಲಿ ನೀಡಿದ್ದ ಶೇ 10 ರಿಯಾಯಿತಿಯನ್ನು 24/7/2022ರ ತನಕ ವಿಸ್ತರಣೆ ಮಾಡಲಾಗಿದೆ.
ಕಂದಾಯ ಇಲಾಖೆ ರಾಜ್ಯದಾದ್ಯಂತ ಎಲ್ಲ ಸ್ವತ್ತುಗಳ ಮಾರಾಟ ಮತ್ತು ಖರೀದಿ ಮಾಡುವವರಿಗೆ ಮಾರ್ಗಸೂಚಿ ಬೆಲೆಯಲ್ಲಿ ಶೇ 10ರ ರಿಯಾಯಿತಿ ಘೋಷಣೆ ಮಾಡಿತ್ತು. 1/1/2022 ರಿಂದ 31/3/2022ರ ತನಕ ಮೂರು ತಿಂಗಳ ಅವಧಿಗೆ ಮೊದಲು ಇದನ್ನು ಘೋಷಣೆ ಮಾಡಲಾಗಿತ್ತು.
ಗುರುವಾರ ಹೊಸ ಆದೇಶ ಹೊರಡಿಸಿದ್ದು ಜನರ ಬೇಡಿಕೆಯಂತೆ ಈ ರಿಯಾಯಿತಿಯನ್ನು ದಿನಾಂಕ 25/4/2022 ರಿಂದ 24/7/2022 ವರೆಗೆ ಮುಂದುವರೆಸಲಾಗುತ್ತದೆ ಎಂದು ತಿಳಿಸಲಾಗಿದೆ.

ಕೋವಿಡ್ ಕಾಲದಲ್ಲಿ ಆದ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಆಸ್ತಿ ಖರೀದಿಗೆ ಬೆಂಬಲ ನೀಡಿತ್ತು. ಆದ್ದರಿಂದ ಎಲ್ಲಾ ಸ್ವತ್ತುಗಳ ಮಾರಾಟ ಮತ್ತು ಖರೀದಿ ಮಾರ್ಗಸೂಚಿ ದರದಲ್ಲಿ ಕಡಿತಗೊಳಿಸಿ ಜನವರಿಯಲ್ಲಿ ಆದೇಶ ಹೊರಡಿಸಿತ್ತು.
ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಅಪಾರ್ಟ್ಮೆಂಟ್, ಕಟ್ಟಡ ಸೇರಿ ವಿವಿಧ ಮಾರಾಟ, ಖರೀದಿಗೆ ಈ ರಿಯಾಯಿತಿ ಅನ್ವಯವಾಗುತ್ತದೆ. ಈಗ ಈ ರಿಯಾಯಿತಿಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಸರ್ಕಾರದ ಈ ತೀರ್ಮಾನದಿಂದ ಮಾರ್ಗಸೂಚಿ ದರ ಇಳಿಕೆಯಾಗಲಿದೆ. ಇದರಿಂದಾಗಿ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಕಡಿಮೆಯಾಗಲಿದೆ. ಆಸ್ತಿ ಖರೀದಿ ಮಾಡುವವರಿಗೆ ಉಳಿತಾಯವಾಗಲಿದ್ದು, ಆಸ್ತಿ ಖರೀದಿ ಹೆಚ್ಚಾದರೆ ಸರ್ಕಾರಕ್ಕೆ ಆದಾಯವೂ ಹೆಚ್ಚಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications