ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌.ಎಂ.ಕೃಷ್ಣಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 06 : 2018ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿಯನ್ನು ನೀಡುತ್ತದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ದತ್ತಿ ಪ್ರಶಸ್ತಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ಉತ್ತರದಿಂದ ಎಸ್‌.ಎಂ.ಕೃಷ್ಣ ಪುತ್ರಿ ಶಾಂಭವಿ ಕಾಂಗ್ರೆಸ್‌ ಅಭ್ಯರ್ಥಿ?ಬೆಂಗಳೂರು ಉತ್ತರದಿಂದ ಎಸ್‌.ಎಂ.ಕೃಷ್ಣ ಪುತ್ರಿ ಶಾಂಭವಿ ಕಾಂಗ್ರೆಸ್‌ ಅಭ್ಯರ್ಥಿ?

ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ 25 ಸಾವಿರ ರೂ. ನಗದು ಬಹುಮಾನ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಹೇಳಿದ್ದಾರೆ.

ಕುತೂಹಲ ಮೂಡಿಸಿದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಭೇಟಿಕುತೂಹಲ ಮೂಡಿಸಿದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಭೇಟಿ

SM Krishna chosen for Kengal Hanumanthaiah award

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಈಗ ಬಿಜೆಪಿಯಲ್ಲಿದ್ದಾರೆ.

ಬೆಂಗಳೂರು ಉತ್ತರದಲ್ಲಿ ದೇವೇಗೌಡ V/S ಎಸ್ ಎಂ ಕೃಷ್ಣ?ಬೆಂಗಳೂರು ಉತ್ತರದಲ್ಲಿ ದೇವೇಗೌಡ V/S ಎಸ್ ಎಂ ಕೃಷ್ಣ?

2019ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ಎಚ್.ಬಿ.ಮದನಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ 10 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.

English summary
Karnataka Former Chief Minister S.M.Krishna chosen for the Kengal Hanumanthaiah award. Award will be present by Kannada Sahitya Parishat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X