ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಿಕೆ

ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು.

By Mahesh
|
Google Oneindia Kannada News

ನವದೆಹಲಿ/ಬೆಂಗಳೂರು, ಮಾರ್ಚ್ 15: ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೃಷ್ಣ ಅವರ ಸೋದರಿ ಸುನೀತಾ ಅವರು ನಿಧನರಾದ ಹಿನ್ನಲೆಯಲ್ಲಿ ಕೃಷ್ಣ ಅವರು ತಕ್ಷಣವೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. [ಎಸ್ಸೆಂ ಕೃಷ್ಣ ಅವರಿಗೆ ಬಿಜೆಪಿಯಿಂದ ಭರ್ಜರಿ ಆಫರ್]

SM Krishna's induction into BJP delayed

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿ ಸೇರಲು ಕೃಷ್ಣ ಅವರು ಮುಂದಾಗಿದ್ದರು. ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ನಂಟು ಕಳಚಿಕೊಂಡ ಕೃಷ್ಣ ಅವರಿಗೆ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಸೇರುವಂತೆ ಆಹ್ವಾನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Former external affairs minister and Congress veteran S M Krishna was all set to join the BJP on March 15. But, Karnataka's former CM SM Krishna's induction into BJP delayed following his sister's death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X