CCD Owner VG Siddhartha Missing ; ಸಿದ್ಧಾರ್ಥ ಹುಡುಕಾಟಕ್ಕಾಗಿ 4 ವಿಶೇಷ ತಂಡಗಳ ರಚನೆ
ಬೆಂಗಳೂರು, ಜುಲೈ 30: ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಅಳಿಯ ಖ್ಯಾತ ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರು ನಿನ್ನೆ ರಾತ್ರಿ ಹಠಾತ್ತಾಗಿ ನಾಪತ್ತೆ ಆಗಿದ್ದಾರೆ.
ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಮಂಗಳೂರು-ಉಲ್ಲಾಳ ರಸ್ತೆಯ ನೇತ್ರಾವತಿ ನದಿಯ ಸೇತುವೆ ಬಳಿ ಕೊನೆಯದಾಗಿ ಸಿದ್ಧಾರ್ಥ ಅವರು ಕಾಣಿಸಿಕೊಂಡಿದ್ದರು. ಸಿದ್ಧಾರ್ಥ ಅವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಎಸ್ಎಂ ಕೃಷ್ಣ ಅಳಿಯ, ಕಾಫಿ ಡೇ ಸ್ಥಾಪಕ ಸಿದ್ದಾರ್ಥ ನಾಪತ್ತೆ
ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದರು, ನೇತ್ರಾವತಿ ಸೇತುವೆ ಬಳಿ ಇನ್ನೋವಾ ಕಾರು ಚಲಿಸುತ್ತಿದ್ದಂತೆ, ಚಾಲಕನಿಗೆ ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಕಾರನ್ನು ಯೂ ಟರ್ನ್ ಮಾಡಿ ಬರುವಂತೆ ಹೇಳಿದ್ದಾರೆ. ಅಷ್ಟರಲ್ಲಿ ಸೇತುವೆ ಬಳಿಯಿಂದ ಕಣ್ಮರೆಯಾಗಿದ್ದಾರೆ ಎಂದು ಸಿದ್ದಾರ್ಥ್ ಅವರ ಕಾರಿನ ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ.
ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳ ಒಡೆಯರಾಗಿದ್ದ ಸಿದ್ಧಾರ್ಥ ಅವರು ಇತ್ತೀಚೆಗೆ ಹಣಕಾಸಿನ ಮುಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಸಿದ್ಧಾರ್ಥ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ.
ಕಾಫಿ ಡೇ ಸಿದ್ಧಾರ್ಥ ನಾಪತ್ತೆ: ಸುಳಿವು ನೀಡದ ಡ್ರೈವರ್ ದೂರು
ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಅತ್ಯುತ್ತಮ ಮುಳುಗು ತಜ್ಞರನ್ನು ಕರೆಸಲಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಸಿದ್ಧಾರ್ಥ ಅವರ ನಾಪತ್ತೆ ಪ್ರಕರಣದ ಕ್ಷಣ-ಕ್ಷಣದ ಮಾಹಿತಿ ಒನ್ಇಂಡಿಯಾ ಕನ್ನಡದಲ್ಲಿ
The letter purportedly written by Shri VG Siddhartha which is circulating is dated July 27th.
— DK Shivakumar (@DKShivakumar) July 30, 2019
I received a call from him on the 28th asking if we could meet up.
It’s unbelievable that a courageous man like him would resort to this. pic.twitter.com/bXcJhHz0QS
However, I find this utterly fishy and urge that a thorough Investigation be conducted into this matter.
— DK Shivakumar (@DKShivakumar) July 30, 2019
Shri Siddhartha and his family were closely known to me for decades now.