School Admission: ಅನಾಥ ಮಕ್ಕಳಿಗೆ ಈ ಶಾಲೆಗಳಲ್ಲಿ ನೇರ ಪ್ರವೇಶಾತಿ, ಉಚಿತ ಶಿಕ್ಷಣ
ತಂದೆ-ತಾಯಿ ಇಲ್ಲದೆ ತಬ್ಬಲಿ ಮಕ್ಕಳಿಗಾಗಿ ರಾಜ್ಯ ಸರ್ಕಾರವು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಮೂಲಕ ಅವರ ಭವಿಷ್ಯಕ್ಕೆ ದಾರಿದೀಪವಾಗಲು ಮುಂದಾಗಿದೆ. ತಂದೆ ತಾಯಿ ಇಲ್ಲದ ತಬ್ಬಲಿ ಮಕ್ಕಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ನೇರ ಪ್ರವೇಶಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ನೀಡಿರುವ ಆದೇಶದಲ್ಲಿ, ತಂದೆ ತಾಯಿ ಇಲ್ಲದೆ ಮಕ್ಕಳನ್ನು ಭಿಕ್ಷಾಟನೆಗೆ ಮತ್ತು ಇತರ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ಈ ಮಕ್ಕಳನ್ನು ನೇರ ಪ್ರವೇಶಾತಿ ಕಲ್ಪಿಸಿ ಕೂಡಲೇ ಕ್ರಮ ವಹಿಸುವಂತೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಪೋಷಕರಿಲ್ಲದ ಮಕ್ಕಳು ಸಾಕಷ್ಟು ಮಂದಿ ಇದ್ದಾರೆ. ಇವರನ್ನು ಕೆಲವರು ಭಿಕ್ಷಾಟನೆ ಸೇರಿದಂತೆ ಹಲವು ಕೃತ್ಯಗಳಿಗೆ ಬಳಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಇವರಿಗೆ ವಸತಿ ಸಹಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ.
ತಂದೆ ತಾಯಿ ಇಲ್ಲದ ಅನಾಥ ಮಕ್ಕಳು ಭಿಕ್ಷಾಟನೆಯಂತಹ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಸಮಾಜ ಕಲ್ಯಾಣ ಇಲಾಖೆಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇಂತಹ ಮಕ್ಕಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳಿಗೆ ನೇರವಾಗಿ ಸೇರಿಸಿಕೊಳ್ಳುವಂತೆ ತೀರ್ಮಾನಿಸಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರದ ಮೂಲಕ ನಿರ್ದೇಶಿಸಿದ್ದಾರೆ.

ರಾಜ್ಯದಲ್ಲಿ ಅನಾಥ ಮಕ್ಕಳನ್ನು ಭಿಕ್ಷಾಟನೆ ಸೇರಿದಂತೆ ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಹಿನ್ನೆಲೆ ಕ್ರೈಸ್ ಅಧೀನಕ್ಕೆ ಬರುವ ವಸತಿ ಶಾಲೆಗಳಲ್ಲಿ ನೇರವಾಗಿ 6ನೇ ತರಗತಿಗೆ ಈ ಮಕ್ಕಳಿಗೆ ಪ್ರವೇಶಾತಿ ಕಲ್ಪಿಸಬೇಕು. ಈ ಸಂಬಂಧ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಿ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಿಗೆ ಸೇರುವ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇರುತ್ತದೆ. ಆದರೆ ಈ ಅನಾಥ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇರುವುದಿಲ್ಲ. ಇವರಿಗೆ ಯಾವ ಸಮಯದಲ್ಲಾದರೂ ವಸತಿ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಈ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ, ನೋಟ್ ಪುಸ್ತಕ, ಶೂ, ಸಾಕ್ಸ್, ಟೈ, ಬೆಲ್ಟ್, ಶಾಲಾ ಬ್ಯಾಗ್ ಸೇರಿದಂತೆ ಎಲ್ಲ ಪರಿಕರಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಶಿಕ್ಷಣ ಮತ್ತು ವಸತಿ ವ್ಯವಸ್ಥೆ ಈ ಮಕ್ಕಳಿಗೆ ಉಚಿತವಾಗಿ ಸಿಗಲಿದೆ. ಇಲಾಖೆಯ ಈ ಹೊಸ ಸೂಚನೆಯಂತೆ ಅನಾಥ ಮಕ್ಕಳು ಒಂದು ಬಾರಿ 6ನೇ ತರಗತಿಗೆ ನೇರವಾಗಿ ಪ್ರವೇಶ ಪಡೆದು 12ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯಲಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications