ಸಚಿವ ಆಂಜನೇಯ ಪ್ರಕರಣ : ಯಾರು, ಏನು ಹೇಳಿದರು?
ಬೆಂಗಳೂರು, ನವೆಂಬರ್ 06 : 'ಹಾಸ್ಟೆಲ್ಗಳಿಗೆ ಆಹಾರ ಧಾನ್ಯ ಪೂರೈಸುವ ಟೆಂಡರ್ ನೀಡಲು ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು' ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಪ್ರತಿಪಕ್ಷಗಳು ಆಂಜನೇಯ ಅವರ ರಾಜೀನಾಮೆಗೆ ಒತ್ತಾಯಿಸಿವೆ.
ಖಾಸಗಿ ವಾಹಿನಿಯ ರಹಸ್ಯ ಕಾರ್ಯಾಚರಣೆ ಪ್ರಸಾರವಾದ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಂಜನೇಯ ಅವರು,'ಭ್ರಷ್ಟಾಚಾರ ಆರೋಪವು ನನ್ನನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಪಿತೂರಿ. ನನ್ನ ತೇಜೋವಧೆ ಸಂಚು ಮಾಡಲಾಗಿದೆ' ಎಂದು ಆರೋಪಿಸಿದರು. [ಸಚಿವ ಆಂಜನೇಯ ಪತ್ನಿಯಿಂದಲೇ ಅಕ್ಕಿ ಕಮಿಷನ್ ಡೀಲ್?]
'ನಮ್ಮ ಮನೆಗೆ ಯಾರೋ ಬಂದು ನನ್ನ ಪತ್ನಿಯನ್ನು ಭೇಟಿ ಮಾಡಲು ಇಚ್ಛಿಸಿದರು. ಆಗ ದುಡ್ಡಿನ ವಿಚಾರ ಮಾತನಾಡಿಲ್ಲ. ಅವರು ಮನೆಯಿಂದ ಹೊರ ಹೋದ ನಂತರ ಟೇಬಲ್ ಮೇಲೆ ಒಂದು ಕವರ್ ಇತ್ತು. ಅದರಲ್ಲಿ ಹಣ ಇರಲಿಲ್ಲ' ಎಂದು ಆಂಜನೇಯ ಸ್ಪಷ್ಟಪಡಿಸಿದರು.
ಸಚಿವ ಆಂಜನೇಯ ಅವರ ನಿವಾಸದಲ್ಲಿನ ಡೀಲ್ ಬಗ್ಗೆ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ' ಎಂದು ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆಂಜನೇಯ ವಿಚಾರದಲ್ಲಿ ಯಾರು ಏನು ಹೇಳಿದರು ಚಿತ್ರಗಳಲ್ಲಿ ನೋಡಿ...

'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ'
ಸಚಿವ ಆಂಜನೇಯ ಅವರ ನಿವಾಸದಲ್ಲಿನ ಡೀಲ್ ಬಗ್ಗೆ ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ' ಎಂದು ಹೇಳಿದ್ದಾರೆ.

'ಸರ್ಕಾರದ ಬಣ್ಣ ಈಗ ಬಯಲಾಗಿದೆ'
ಸಚಿವ ಆಂಜನೇಯ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು 'ನಮ್ಮ ಸಂಪುಟದಲ್ಲಿ ಭ್ರಷ್ಟರು ಇಲ್ಲ. ನಾವು ಸತ್ಯಹರಿಶ್ಚಂದ್ರನ ವಂಶದವರು ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದರು, ಈಗ ಬಣ್ಣ ಬಯಲಾಗಿದೆ. ಆಂಜನೇಯ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

'ತಕ್ಷಣ ಸಂಪುಟದಿಂದ ವಜಾ ಮಾಡಿ'
'ಸಚಿವ ಆಂಜನೇಯ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. 'ಸಚಿವರ ನಿವಾಸದಲ್ಲಿಯೇ ಈ ಅವ್ಯವಹಾರ ನಡೆದಿರುವುದು ಶೋಚನೀಯ. ಬಡಮಕ್ಕಳಿಗೆ ನೀಡುವ ಊಟದಲ್ಲಿ ಹಣ ಲೂಟಿ ಮಾಡಲು ಪ್ರಯತ್ನ ನಡೆಸಿರುವುದು ನಾಚಿಕೆಗೇಡಿನ ಸಂಗತಿ' ಎಂದು ಹೇಳಿದ್ದಾರೆ.

'ಆಂಜನೇಯ ಅವರು ರಾಜೀನಾಮೆ ನೀಡಲಿ'
'ಹಾಸ್ಟೆಲ್ಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವ ವಿಚಾರದಲ್ಲಿ ಅಕ್ರಮ ನಡೆದಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಚಿವರು ನೀಡಿದ ಸ್ಪಷ್ಟನೆಗಳು
ಸಚಿವ ಆಂಜನೇಯ ಅವರು ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಜಿಲ್ಲಾ ಮಟ್ಟದಲ್ಲಿ ಆಹಾರ ಪೂರೈಕೆಗೆ ಗುತ್ತಿಗೆ ಕರೆಯಲಾಗಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ 17 ಜನ ಭಾಗವಹಿಸಿದ್ದರು. ಅರ್ಹ ಎಲ್1 ಗುತ್ತಿಗೆದಾರರಿಗೆ ಆಹಾರ ಪೂರೈಕೆಗೆ ಅನುಮತಿ ನೀಡಲಾಗಿತ್ತು. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ' ಎಂದು ಹೇಳಿದ್ದಾರೆ. 'ಈ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ' ಎಂದು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications