ವರ್ಗಾವಣೆಗೆ ಈಗ ಸಾಫ್ಟ್ವೇರ್ ಸಮಸ್ಯೆ: ಸಾವಿರಾರು ಶಿಕ್ಷಕರಿಗೆ ನಿರಾಸೆ
Recommended Video

ಬೆಂಗಳೂರು, ಅಕ್ಟೋಬರ್ 16: ದೇವರು ಕೊಟ್ಟರೂ ವರ ಪೂಜಾರಿ ಕೊಡುವುದಿಲ್ಲ ಎನ್ನುವಂತಾಗಿದೆ ನಮ್ಮ ರಾಜ್ಯದ ಶಿಕ್ಷಕರ ಪರಿಸ್ಥಿತಿ. ಇಷ್ಟು ದಿನಗಳ ಕಾಲ ವರ್ಗಾವಣೆಗಾಗಿ ಸತತ ಹೋರಾಟ ನಡೆಸಿದರೂ ಅಂತಿಮ ಹಂತದಲ್ಲಿ ಸಾಫ್ಟ್ವೇರ್ನಲ್ಲಿ ಸಮಸ್ಯೆ ಕಾಣಿಸಿಕೊಂಡು ಶಿಕ್ಷಕರು ಪರಿತಪಿಸುವಂತಾಗಿದೆ.
ವರ್ಗಾವಣೆ ಮಾಡುವಂತೆ ಎಷ್ಟೇ ಬಾರಿ ಸರ್ಕಾರದ ಮೊರೆ ಹೋಗಿದ್ದರೂ ಕೂಡ ಏನು ಪ್ರಯೋಜನವಾಗಿರಲಿಲ್ಲ, ಅಂತಿಮವಾಗಿ ಶಿಕ್ಷಕರ ವರ್ಗಾವಣೆಗೆ ಸಮ್ಮಿಶ್ರ ಸರ್ಕಾರ ಅಸ್ತು ಎಂದಿತ್ತು. ಬಳಿಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಶಿಕ್ಷಕರ ಕೌನ್ಸಲಿಂಗ್ಗೆ ಅಡ್ಡಿಯಾಗುತ್ತದೆ ಎನ್ನಲಾಗಿತ್ತು.
ಬಳಿಕ ಚುನಾವಣಾ ಆಯೋಗವು ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ಗೆ ಯಾವುದೇ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಸಾಫ್ಟ್ವೇರ್ ಸಮಸ್ಯೆ ಎದುರಾಗಿದ್ದು, ಶಿಕ್ಷಕರಿಗೆ ನಿರಾಸೆ ಉಂಟು ಮಾಡಿದೆ.
ಟಿಡಿಎಸ್ ವರ್ಗಾವಣೆ ತಂತ್ರಾಂಶದಲ್ಲಿ ನಮೂದಾಗಿರುವ ಶಿಕ್ಷಕರ ಸಂಖ್ಯೆಗೂ, ಕೌನ್ಸೆಲಿಂಗ್ ಗೆ ಹಾಜರಾರಿದ್ದ ಶಿಕ್ಷಕರ ಸಂಖ್ಯೆಗೆ ತಾಳೆಯಾಗುತ್ತಿರಲಿಲ್ಲ. ಇದರಿಂದ ಕಾರವಾರ ಸೇರಿದಂತೆ ಹಲವೆಡೆ ಕೌನ್ಸೆಲಿಂಗ್ ಪ್ರಕ್ರಿಯೆಗಳು ಸ್ಥಗಿತಗೊಂಡವು. ಹಾಗಾಗಿ ಕೌನ್ಸೆಲಿಂಗ್ಗೆ ಹಾಜರಾಗಿದ್ದ ಶಿಕ್ಷಕರು ತೆರಳಿದರು.

ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್
ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆನ್ಲೈನ್ ಕೌನ್ಸೆಲಿಂಗ್ ಅ.30ರಿಂದ ನವೆಂಬರ್ 5 ರವರೆಗೆ ನಡೆಯಲಿದೆ. ಹೆಚ್ಚುವರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಈ ಪೆಟ್ಟಿಗೆ ಅ.22ರಿಂದ 26ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಕೋರಿಕೆ ವರ್ಗಾವಣೆ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿ
ಕೋರಿಕೆ ವರ್ಗಾವಣೆ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿ ನ.11ರಂದು ಹಾಗೂ ಪರಸ್ಪರ ವರ್ಗಾವಣೆ ಶಿಕ್ಷಕರ ಅಂತಿಮ ಪಟ್ಟಿ ನ.10ರಂದು ಬಿಡುಗಡೆಯಾಗಲಿದ್ದು, ನ.29ರಂದು ಕೌನ್ಸೆಲಿಂಗ್ ನಡೆಯಲಿದೆ.

ವರ್ಗಾವಣೆ ಪಟ್ಟಿ ಪ್ರಕಟ
ಶಿಕ್ಷಣ ಇಲಾಖೆಯು ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅ.22ರಿಂದ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಲಿದೆ. ಇಲಾಖೆಯ ವೆಬ್ಸೈಟ್ http://www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ.

ಶಿಕ್ಷಕರ ವರ್ಗಾವಣೆಯನ್ನು ಶಿಕ್ಷಣ ಸಚಿವರೇ ತಡೆದರು
ಈ ವರ್ಷವೂ ಕೂಡ ಶಿಕ್ಷಕರ ವರ್ಗಾವಣೆ ಕನಸಾಗಿಯೇ ಉಳಿಯಲಿದೆ ಎನ್ನುವ ಭಾವನೆ ಮೂಡಿತ್ತು. ಯಾಕೆಂದರೆ ಆದರೆ ಕಳೆದ ಒಂದು ತಿಂಗಳಿಂದ ಈ ವರ್ಷವಾದರೂ ವರ್ಗಾವಣೆ ಭಾಗ್ಯ ಸಿಗಬಹುದು ಎಂದು ಶಿಕ್ಷಕರು ಕಾಯುತ್ತಿದ್ದರು. ಮೂರ್ನಾಲ್ಕು ವರ್ಷಗಳಿಂದ ಒಂದಲ್ಲಾ ಒಂದು ಕಾರಣದಿಂದ ರಾಜ್ಯ ಸರ್ಕಾರಿ ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಸರ್ಕಾರ ಮುಂದೂಡುತ್ತಲೇ ಬಂದಿತ್ತು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications