ವರ್ಗಾವಣೆಗೆ ಈಗ ಸಾಫ್ಟ್ವೇರ್ ಸಮಸ್ಯೆ: ಸಾವಿರಾರು ಶಿಕ್ಷಕರಿಗೆ ನಿರಾಸೆ
Recommended Video

ಬೆಂಗಳೂರು, ಅಕ್ಟೋಬರ್ 16: ದೇವರು ಕೊಟ್ಟರೂ ವರ ಪೂಜಾರಿ ಕೊಡುವುದಿಲ್ಲ ಎನ್ನುವಂತಾಗಿದೆ ನಮ್ಮ ರಾಜ್ಯದ ಶಿಕ್ಷಕರ ಪರಿಸ್ಥಿತಿ. ಇಷ್ಟು ದಿನಗಳ ಕಾಲ ವರ್ಗಾವಣೆಗಾಗಿ ಸತತ ಹೋರಾಟ ನಡೆಸಿದರೂ ಅಂತಿಮ ಹಂತದಲ್ಲಿ ಸಾಫ್ಟ್ವೇರ್ನಲ್ಲಿ ಸಮಸ್ಯೆ ಕಾಣಿಸಿಕೊಂಡು ಶಿಕ್ಷಕರು ಪರಿತಪಿಸುವಂತಾಗಿದೆ.
ವರ್ಗಾವಣೆ ಮಾಡುವಂತೆ ಎಷ್ಟೇ ಬಾರಿ ಸರ್ಕಾರದ ಮೊರೆ ಹೋಗಿದ್ದರೂ ಕೂಡ ಏನು ಪ್ರಯೋಜನವಾಗಿರಲಿಲ್ಲ, ಅಂತಿಮವಾಗಿ ಶಿಕ್ಷಕರ ವರ್ಗಾವಣೆಗೆ ಸಮ್ಮಿಶ್ರ ಸರ್ಕಾರ ಅಸ್ತು ಎಂದಿತ್ತು. ಬಳಿಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಶಿಕ್ಷಕರ ಕೌನ್ಸಲಿಂಗ್ಗೆ ಅಡ್ಡಿಯಾಗುತ್ತದೆ ಎನ್ನಲಾಗಿತ್ತು.
ಬಳಿಕ ಚುನಾವಣಾ ಆಯೋಗವು ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ಗೆ ಯಾವುದೇ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಸಾಫ್ಟ್ವೇರ್ ಸಮಸ್ಯೆ ಎದುರಾಗಿದ್ದು, ಶಿಕ್ಷಕರಿಗೆ ನಿರಾಸೆ ಉಂಟು ಮಾಡಿದೆ.
ಟಿಡಿಎಸ್ ವರ್ಗಾವಣೆ ತಂತ್ರಾಂಶದಲ್ಲಿ ನಮೂದಾಗಿರುವ ಶಿಕ್ಷಕರ ಸಂಖ್ಯೆಗೂ, ಕೌನ್ಸೆಲಿಂಗ್ ಗೆ ಹಾಜರಾರಿದ್ದ ಶಿಕ್ಷಕರ ಸಂಖ್ಯೆಗೆ ತಾಳೆಯಾಗುತ್ತಿರಲಿಲ್ಲ. ಇದರಿಂದ ಕಾರವಾರ ಸೇರಿದಂತೆ ಹಲವೆಡೆ ಕೌನ್ಸೆಲಿಂಗ್ ಪ್ರಕ್ರಿಯೆಗಳು ಸ್ಥಗಿತಗೊಂಡವು. ಹಾಗಾಗಿ ಕೌನ್ಸೆಲಿಂಗ್ಗೆ ಹಾಜರಾಗಿದ್ದ ಶಿಕ್ಷಕರು ತೆರಳಿದರು.

ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್
ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆನ್ಲೈನ್ ಕೌನ್ಸೆಲಿಂಗ್ ಅ.30ರಿಂದ ನವೆಂಬರ್ 5 ರವರೆಗೆ ನಡೆಯಲಿದೆ. ಹೆಚ್ಚುವರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಈ ಪೆಟ್ಟಿಗೆ ಅ.22ರಿಂದ 26ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಕೋರಿಕೆ ವರ್ಗಾವಣೆ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿ
ಕೋರಿಕೆ ವರ್ಗಾವಣೆ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿ ನ.11ರಂದು ಹಾಗೂ ಪರಸ್ಪರ ವರ್ಗಾವಣೆ ಶಿಕ್ಷಕರ ಅಂತಿಮ ಪಟ್ಟಿ ನ.10ರಂದು ಬಿಡುಗಡೆಯಾಗಲಿದ್ದು, ನ.29ರಂದು ಕೌನ್ಸೆಲಿಂಗ್ ನಡೆಯಲಿದೆ.

ವರ್ಗಾವಣೆ ಪಟ್ಟಿ ಪ್ರಕಟ
ಶಿಕ್ಷಣ ಇಲಾಖೆಯು ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅ.22ರಿಂದ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಲಿದೆ. ಇಲಾಖೆಯ ವೆಬ್ಸೈಟ್ http://www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ.

ಶಿಕ್ಷಕರ ವರ್ಗಾವಣೆಯನ್ನು ಶಿಕ್ಷಣ ಸಚಿವರೇ ತಡೆದರು
ಈ ವರ್ಷವೂ ಕೂಡ ಶಿಕ್ಷಕರ ವರ್ಗಾವಣೆ ಕನಸಾಗಿಯೇ ಉಳಿಯಲಿದೆ ಎನ್ನುವ ಭಾವನೆ ಮೂಡಿತ್ತು. ಯಾಕೆಂದರೆ ಆದರೆ ಕಳೆದ ಒಂದು ತಿಂಗಳಿಂದ ಈ ವರ್ಷವಾದರೂ ವರ್ಗಾವಣೆ ಭಾಗ್ಯ ಸಿಗಬಹುದು ಎಂದು ಶಿಕ್ಷಕರು ಕಾಯುತ್ತಿದ್ದರು. ಮೂರ್ನಾಲ್ಕು ವರ್ಷಗಳಿಂದ ಒಂದಲ್ಲಾ ಒಂದು ಕಾರಣದಿಂದ ರಾಜ್ಯ ಸರ್ಕಾರಿ ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಸರ್ಕಾರ ಮುಂದೂಡುತ್ತಲೇ ಬಂದಿತ್ತು.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications