ಅಯೋಧ್ಯೆಗೆ ರಾಮನಗರದ ಬೆಳ್ಳಿ ಇಟ್ಟಿಗೆ, ಶಲ್ಯ, ರೇಷ್ಮೆ ಸೀರೆ ಕಾಣಿಕೆಯಾಗಿ ನೀಡಲಾಗುವುದು: ಅಶ್ವಥ್ ನಾರಾಯಣ
ಬೆಂಗಳೂರು, ಡಿಸೆಂಬರ್ 13: ಅಯೋಧ್ಯೆ ರಾಮಮಂದಿರದಿಂದ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸಿ ತಂದು ರಾಮನಗರ ಜಿಲ್ಲೆಯಲ್ಲಿ ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು. ಅದಕ್ಕು ಮುನ್ನ ಅಯೋಧ್ಯೆಗೆ ರಾಮನಗರದ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯವನ್ನು ಕೋಡುಗೆಯಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು.
ಅಯೋಧ್ಯೆಗೆ ರಾಮನಗರ ಜಿಲ್ಲೆಯ ಭಕ್ತಿ ಸಮರ್ಪಣೆ ಕುರಿತು ಮಾತನಾಡಿದ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ರಾಮನಗರ ಜಿಲ್ಲೆಯ 150 ಮಂದಿಯ ತಂಡದೊಂದಿಗೆ ಬುಧವಾರ ತೆರಳಲಿದ್ದೇವೆ. ಮಂದಿರಕ್ಕೆ ರಾಮನಗರದ ಒಂದು ಬೆಳ್ಳಿ ಇಟ್ಟಿಗೆ, ಸ್ಥಳೀಯ ರೇಷ್ಮೆ ಸೀರೆ ಮತ್ತು ಶಲ್ಯವನ್ನು ಕಾಣಿಕೆಯಾಗಿ ಕೊಡಲಾಗುತ್ತಿದೆ ಎಂದರು.
ರಾಮನಗರ ಜಿಲ್ಲೆ ರೇಷ್ಮೆಗೆ ಹೆಸರಾಗಿದೆ. ಹೀಗಾಗಿ ಸೀತಾದೇವಿಗೆ ಇಲ್ಲಿನ ರೇಷ್ಮೆ ಸೀರೆ, ರಾಮ ಮತ್ತು ಲಕ್ಷ್ಮಣರಿಗೆ ಶಲ್ಯ ಕೊಡಲಾಗುವುದು. ರಾಮನಗರದ ರಾಮಭಕ್ತರ ದೇಣಿಗೆಯಿಂದ ಖರೀದಿಸಿರುವ ಬೆಳ್ಳಿ ಇಟ್ಟಿಗೆಗೆ ರಾಮನಗರದ ರಾಮದೇವರ ಬೆಟ್ಟ ಮತ್ತು ಕೆಂಗಲ್ ಹನುಮಂತರಾಯನ ದೇಗುಲದಲ್ಲಿ ವಿಧಿಬದ್ಧವಾಗಿ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಆಯೋಧ್ಯೆ-ರಾಮದೇವರ ಬೆಟ್ಟಕ್ಕೆ ಪರಂಪರಾಗತ ಸಂಬಂಧ
ಮುಖ್ಯವಾಗಿ ರಾಮದೇವರ ಬೆಟ್ಟದ ತಾಣವಾದ ರಾಮನಗರ ಮತ್ತು ರಾಮನ ಮೂಲತಾಣ ಅಯೋಧ್ಯೆ ನಡುವೆ ಪರಂಪರಾಗತ ಸಂಬಂಧವಿದೆ. ಅಲ್ಲಿಂದಲೂ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿ ತಂದು, ಇಲ್ಲಿನ ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು. ಜತೆಗೆ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಿ, ಆಕರ್ಷಕ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಶ್ರೀರಾಮ ನಮ್ಮ ಸನಾತನ ಸಂಸ್ಕೃತಿ ಮತ್ತು ಮೌಲ್ಯಗಳ ಮೂಲಪುರುಷ ಆಗಿದ್ದಾನೆ. ಸ್ಥಳೀಯರ ತಂಡದೊಂದಿಗೆ ತಾವೂ ತೆರಳುತ್ತಿದ್ದು, ಗುರುವಾರ ಅಯೋಧ್ಯೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪ್ರಶಂಸಿಸಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications