ಗದಗದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ
ಗದಗ, ನವೆಂಬರ್, 09 : ರಾಜ್ಯ ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪುಸುಲ್ತಾನ್ ಜಯಂತಿಯನ್ನು ತೀವ್ರವಾಗಿ ವಿರೋಧಿಸಿದ ಶ್ರೀರಾಮ ಸೇನಾ ಕಾರ್ಯಕರ್ತರ ಮೇಲೆ ಯುವಕರ ತಂಡ ನವೆಂಬರ್ 8ರ ಭಾನುವಾರದಂದು ಹಲ್ಲೆ ನಡೆಸಿದೆ.
ಜುಮ್ಮಾ ಮಸೀದಿಯ ಹತ್ತಿರ ಶ್ರೀರಾಮ ಸೇನೆ ಕಾರ್ಯಕರ್ತ ಪರಶುರಾಮ ಆಡೀನ ಎಂಬುವರ ಮೇಲೆ ಕೋಲು ಮತ್ತು ಕಲ್ಲುಗಳಿಂದ ಹಲ್ಲೆ ಮಾಡಲಾಗಿದೆ. ಇದರ ಪರಿಣಾಮ ಪರಶುರಾಮ್ ನ ಎದೆ, ತಲೆ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.['ಮಹಾತ್ಮಾ ಗಾಂಧೀಜಿಯಂತೆ ಗೋಡ್ಸೆ ಕೂಡಾ ದೇಶಭಕ್ತ']

ಶ್ರೀರಾಮ ಸೇನೆಯ ಕಾರ್ಯಕರ್ತ ಪರಶುರಾಮ ಆಡೀನ ಮೇಲಿನ ಹಲ್ಲೆಯಿಂದ ನಗರದ ಕಾನತೋಟ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣ ತಲೆದೋರಿದ್ದು, ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್, ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ, ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ ಮುಂತಾದವರು ತೀವ್ರವಾಗಿ ಖಂಡಿಸಿದ್ದಾರೆ.[ಶ್ರೀರಾಮಸೇನೆ ಉಲ್ಲೇಖ ಸರಿ ಅಲ್ಲ: ಚೆನ್ನವೀರ ಕಣವಿ ಸ್ಪಷ್ಟನೆ]
ರಾಜ್ಯ ಸರ್ಕಾರ ನವೆಂಬರ್ 10ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ತೀರ್ಮಾನಿಸಿತ್ತು. ಆಗ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹಾಗೂ ಪರಶುರಾಮ ಆಡೀನ ಮತ್ತು ಇತರರು ನವೆಂಬರ್ 6ರ ಶನಿವಾರದಂದು ಗದಗಕ್ಕೆ ಭೇಟಿ ನೀಡಿದ ಇವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಸರ್ಕಾರ ಟಿಪ್ಪು ಸುಲ್ತಾನ ಜಯಂತಿ ಆಚರಣೆಯನ್ನು ಕೈಬಿಡಬೇಕೆಂದು ಆಗ್ರಹಿಸಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications