ಕರ್ನಾಟಕ ಬಜೆಟ್ ವಿರುದ್ದ ಕೆಲವು ಕಾಂಗ್ರೆಸ್ ನಾಯಕರ ಅತೃಪ್ತಿ!

Recommended Video

      Karnataka Budget 2018 : ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ

      ಬೆಂಗಳೂರು, ಜುಲೈ 06 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಿದ ಬಳಿಕ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ. ತುರ್ತಾಗಿ ಸಮನ್ವಯ ಸಮಿತಿ ಸಭೆ ಕರೆಯುವಂತೆ ನಾಯಕರು ಒತ್ತಾಯಿಸಿದ್ದಾರೆ.

      ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದೆ ಎಂದು ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ ಎಂದು ಕೆಲವು ನಾಯಕರು ಆರೋಪ ಮಾಡಿದ್ದು, ಸಮನ್ವಯ ಸಮಿತಿ ಸಭೆ ಕರೆಯಲಿ ಎಂದು ಆಗ್ರಹಿಸಿದ್ದಾರೆ.

      ಕಾಂಗ್ರೆಸ್ ನಾಯಕರಾದ ಎಚ್.ಕೆ.ಪಾಟೀಲ್, ಡಿ.ಕೆ.ಸುರೇಶ್, ಜಮೀರ್ ಅಹಮದ್ ಖಾನ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ನಾಯಕರು ಬಜೆಟ್‌ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಈ ನಾಯಕರ ಮುಂದಿನ ನಡೆದ ಕುತೂಹಲಕ್ಕೆ ಕಾರಣವಾಗಿದೆ.

      Some Congress leaders upset with Karnataka budget 2018-19

      'ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಯಾವುದೇ ಯೋಜನೆ, ಅನುದಾನವನ್ನು ನಿಗದಿತವಾಗಿ ನೀಡಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಪಕ್ಷಕ್ಕೆ ಅಲ್ಪ ಸಂಖ್ಯಾತರು ಮತ ಹಾಕಿದ್ದರು. ಅವರನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ' ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು.

      'ಬಜೆಟ್ ಮೇಲಿನ ಚರ್ಚೆಗೆ ಉತ್ತರ ಕೊಡುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗಕ್ಕೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಬೇಕು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ತಕ್ಷಣ ಸಭೆ ಕರೆದು ಆಗಿರುವ ಅನ್ಯಾಯ ಸರಿಪಡಿಸಬೇಕು' ಎಂದು ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+