Get Updates
Get notified of breaking news, exclusive insights, and must-see stories!

ಪಕ್ಷದ ನಾಯಕರಲ್ಲಿದ್ದ ಅಸಮಾಧಾನ ಶಮನಗೊಂಡಿದೆ: ಡಿಕೆಶಿ

ಬೆಂಗಳೂರು, ಜೂನ್ 10: ಪಕ್ಷದ ಕೆಲವು ನಾಯಕರಲ್ಲಿ ಇದ್ದ ಅಸಮಾಧಾನ ಅಂತ್ಯಗೊಂಡಿದೆ. ನಾವು ಎಲ್ಲಾ ಸಮಸ್ಯೆಗಳನ್ನು ಕುಳಿತು ಚರ್ಚೆ ನಡೆಸಿ ಬಗೆಹರಿಸಿದ್ದೇವೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಎಲ್ಲಾ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಸರ್ಕಾರ ಸರಿಯಾಗಿಯೇ ಮುಂದುವರಿಯಲಿದೆ, ಏನೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು

ಕಾಂಗ್ರೆಸ್ ಮತ್ತು ಜೆಡಿಎಸ್ ನ ಕೆಲವು ಅತೃಪ್ತ ಶಾಸಕರು ಬಿಜೆಪಿ ಸೇರಲು ಇಚ್ಛಿಸುತ್ತಿದ್ದಾರೆ ಎಂಬ ಬಿ ಎಸ್ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ತಮ್ಮ ಸೋಲನ್ನು ಒಪ್ಪಿಕೊಳ್ಳಬೇಕು, ಕರ್ನಾಟಕದ ಜನತೆ ಅವರ ಪರವಾಗಿ ಚುನಾವಣೆಯಲ್ಲಿ ತೀರ್ಪು ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ನಾಯಕರಲ್ಲಿದ್ದ ಭಿನ್ನಾಭಿಪ್ರಾಯ ಕೊನೆಯಾಗಿದೆ ಎಂದು ಹೇಳಿದರು.

Some leaders were unhappy but we have sorted the issues: DKS

ಸಚಿವ ಸಂಪುಟ ಪುನರಚನೆ ಬಳಿಕ ಮಾಜಿ ಸಚಿವ ಎಂಬಿ ಪಾಟೀಲ್‌ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದರು. ಜತೆಗೆ ಹೈಕಮಾಂಡ್‌ಗೆ ಹೋಗಿ ಈ ಕುರಿತು ಚರ್ಚೆ ಕೂಡ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆದಿಯಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+