ಬಿಜೆಪಿ ತೆಕ್ಕೆಗೆ ಇನ್ನಷ್ಟು ದೋಸ್ತಿ ಶಾಸಕರು?
Recommended Video
ಬೆಂಗಳೂರು, ಜುಲೈ 22: ಬಿಜೆಪಿ ತೆಕ್ಕೆಗೆ ಇನ್ನಷ್ಟು ಶಾಸಕರು ಬರುವ ಸಾಧ್ಯತೆ ಇದೆ. ಈಗಾಗಲೇ 15 ಕೈ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಮತ್ತಷ್ಟು ಶಾಸಕರು ಬಿಜೆಪಿ ತೆಕ್ಕೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ 15 ಶಾಸಕರು ರಾಜೀನಾಮೆ ನೀಡಿರುವುದು ಮೈತ್ರಿ ಸರ್ಕಾರಕ್ಕೆ ಹೊಡೆತ ಬಿದ್ದಿದೆ ಅವರನ್ನು ಮತ್ತೆ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ.
ರಾಜೀನಾಮೆ ನೀಡಿದ ಶಾಸಕರ ಪೈಕಿ ಹಳೆ ಮೈಸೂರು ಭಾಗದ ಶಾಸಕರು ಕೂಡ ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ ಜಯಗಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದ 8 ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಸೋತರೆ ಮತ್ತೆ ಸರ್ಕಾರ ಅಲ್ಪ ಮತಕ್ಕೆ ಕುಸಿಯಬಹುದು. ಈ ರೀತಿ ಆಗದಂತೆ ತಡೆಯಲು ಬಿಜೆಪಿ ಈಗ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ.
ಕಾಂಗ್ರೆಸ್ಸಿನ ಶಾಸಕರಾದ ಯಶವಂತಪುರದ ಎಸ್.ಟಿ ಸೋಮಶೇಖರ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ ಪಾಟೀಲ್, ವಿಶ್ವಾಸಮತಯಾಚನೆ ಬಾರದೇ ಕೈ ಕೊಟ್ಟಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಬಿಜೆಪಿಯ ಹಿಡಿತ ಹೆಚ್ಚಿದೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಲಿಂಗಾಯತರೇ ನಿರ್ಣಾಯಕರಾಗಿದ್ದಾರೆ. ಹೀಗಾಗಿ 8 ಮಂದಿ ಲಿಂಗಾಯತ ಶಾಸಕರನ್ನು ಸೆಳೆಯಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ.
ಜೆಡಿಎಸ್ಸಿನ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಾಹಾಲಕ್ಷ್ಮಿ ಲೇ ಔಟ್ ಶಾಸಕ ಗೋಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ರಾಜೀನಾಮೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications