CP Yogeshwar: ಸಿಪಿ ಯೋಗೇಶ್ವರ್ ವಿರುದ್ಧ ದೂರು ದಾಖಲಿಸಿದ ಪುತ್ರ
ಬೆಂಗಳೂರು, ನವೆಂಬರ್ 19: ರಾಜಕೀಯದಲ್ಲಿ ರಾಜ್ಯದಲ್ಲಿ ಉಪಚುನಾವಣೆ ಕಾವು ರಾಜ್ಯ ಜೋರಾಗಿದೆ. ಉಪಚುನಾವಣೆ ಹೊತ್ತಲಿ ಸಿ ಪಿ ಯೋಗೇಶ್ವರ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಪುತ್ರಿ ನಿಶಾ ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ರು, ಇದೀಗ ತಂದೆಯ ವಿರುದ್ಧವಾಗಿ ಪುತ್ರ ದೂರು ದಾಖಲಿಸಿದ್ದಾರೆ.
ಚನ್ನಪಟ್ಟಣ ವಿಧಾಸನಭೆ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ 23 ಕ್ಕೆ ಹೊರಬೀಳಲಿದೆ. ಆದರೆ, ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ಗೆ ಸಂಕಷ್ಟ ಎದುರಾಗಿದೆ. ಸಿಪಿ ಯೋಗೇಶ್ವರ್ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವರಾದ ಸಿ ಪಿ ಯೋಗೇಶ್ವರ್ ಅವರ ಪುತ್ರ ಶ್ರವಣ್ ಅವರ ಸಹಿ ನಕಲು ಮಾಡಿದ ಆರೋಪದಡಿ ಸಿಪಿ ಯೋಗೇಶ್ವರ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಪ್ರಕರಣದ ವಿಚಾರಣೆ ಬುಧವಾರ (ನ.20) ನಡೆದಿದೆ.

ಮಾಜಿ ಸಚಿವ ಸಿ ಪಿ ಯೋಗೇಶ್ವರ ಅವರ ಮೊದಲ ಪತ್ನಿ ಮತ್ತು ಪುತ್ರ ಶ್ರವಣ್ ಅವರು ಎರಡೂವರೆ ವರ್ಷದ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿಸಿದ್ದರು. ಈ ಮನೆ ಸಿಪಿ ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದೆ. ಶ್ರವಣ್ ಹಾಗೂ ಶ್ರವಣ್ ತಾಯಿ ಇಬ್ಬರೂ ಸೇರಿ ಮನೆಯನ್ನು ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾಗೆ ಉಡುಗೊರೆಯಾಗಿ ನೀಡಿದ್ದಾರೆ. ಆದರೆ, ಈ ಮನೆಯಲ್ಲಿ ತನಗೂ ಭಾಗ ಬೇಕು ಎಂದು ಸಿಪಿ ಯೋಗೇಶ್ವರ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ.
ಇನ್ನೂ ಇಷ್ಟೇ ಅಲ್ಲದೇ, ನಾನು ನನ್ನ ಅಕ್ಕನಿಗೆ ಮನೆ ಗಿಫ್ಟ್ ನೀಡಿಲ್ಲ. ಮನೆಯಲ್ಲಿ ನನಗೂ ಭಾಗ ಬೇಕು ಅಂತ ಶ್ರವಣ್ ಅವರ ಹೆಸರಿನಲ್ಲಿ ಸಿಪಿ ಯೋಗೇಶ್ವರ ಕೋರ್ಟ್ನಲ್ಲಿ ಅರ್ಜಿ ಹಾಕಿದ್ದಾರೆ. ಈ ಅರ್ಜಿಯಲ್ಲಿ ಶ್ರವಣ್ ಅವರ ಸಹಿಯನ್ನು ಸಿಪಿ ಯೋಗೇಶ್ವರ್ ಮಾಡಿದ್ದಾರೆ. ಹೀಗೆ, ಸಿಪಿ ಯೋಗೇಶ್ವರ್ ಪುತ್ರ ಶ್ರವಣ ಅವರ ಸಹಿ ನಕಲು ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ನನಗೆ ಗೊತ್ತಿಲ್ಲ. ಮನೆಯಲ್ಲಿ ಭಾಗ ಬೇಕು ಅಂತ ನಾನು ಕೇಳಿಲ್ಲ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಶ್ರವಣ್ ಹೇಳಿದ್ದಾರೆ.
ಸಹಿ ಮಾಡಿದ್ದು ಒಪ್ಪಿಕೊಂಡ ಸಿಪಿ ಯೋಗೇಶ್ವರ್
ನಕಲು ಸಿಹಿ ವಿಚಾರವಾಗಿ ಶ್ರವಣ ತಂದೆ ಸಿ ಪಿ ಯೋಗೇಶ್ವರ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇಬ್ಬರ ಸಂಭಾಷಣೆ ರೆಕಾರ್ಡ್ ಆಗಿದೆ. ಅದರಲ್ಲಿ, ಸಿಪಿ ಯೋಗೇಶ್ವರ್ ಸಹಿ ನಕಲು ಮಾಡಿದ್ದಾನ್ನು ಒಪ್ಪಿಕೊಂಡಿದ್ದಾರೆ. ಸಿಪಿ ಯೋಗೇಶ್ವರ ಮತ್ತು ಶ್ರವಣ್ ಮಾತನಾಡಿರುವ ಆಡಿಯೋ ಸಂಭಾಷಣೆ ಇದೀಗ ವೈರಲ್ ಆಗಿದೆ.
ದೂರವಾಣಿ ಸಂಭಾಷಣೆಯಲ್ಲಿ ಏನಿದೆ?
ಶ್ರವಣ್: ಯಾರೋ ವಕೀಲರು ಕರೆ ಮಾಡಿ, ಆಸ್ತಿ ಸಂಬಂಧಿಸಿದ ದಾಖಲೆ ಕೇಳುತ್ತಿದ್ದಾರೆ. ಸಹಿ ಹೊಂದಾಣಿಕೆಯಾಗುತ್ತಿಲ್ಲ ಎನ್ನುತ್ತಿದ್ದಾರೆ. ನಾನು ಯಾವುದೇ ಆಸ್ತಿ ವಕಾಲತ್ಗೆ ಸಹಿ ಮಾಡಿಲ್ಲ. ಆದ್ರೆ, ಈ ಮಾಡಿದ್ದು ಯಾರು?
ಸಿಪಿ ಯೋಗೇಶ್ವರ್: ಹಿಂದೆ ನೀನೆ ಮಾಡಿದ್ದಿಯಲ್ಲ
ಶ್ರವಣ್: ಇಲ್ಲ ನಾನು ಮಾಡಿಲ್ಲ
ಸಿಪಿ ಯೋಗೇಶ್ವರ್: ಇರಲಿ, ಅವರು ಏನ್ ಹೇಳುತ್ತಾರೆ ಅದನ್ನು ಮಾಡು
ಶ್ರವಣ್: ಆದರೆ ನಾನು ಸಹಿ ಮಾಡಿಲ್ಲ, ಯಾರು ಮಾಡಿದ್ದು?
ಇನ್ನೂ ಆಸ್ತಿ ಮಾರಾಟವಾಗಬಾರದು ಅಂತ ನಾನೇ ಮಾಡಿದೆ ಎಂದು ಒಪ್ಪಿಕೊಳ್ಳುತ್ತಾರೆ. ಇದೇ ವಿಚಾರಕ್ಕೆ ಸಿ ಪಿ ಯೋಗೇಶ್ವರ್ ಅವರ ಪುತ್ರ ಶ್ರವಣ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಒಂದು ವೇಳೆ, ಬುಧವಾರ ನಡೆಯುವ ವಿಚಾರಣೆಯಲ್ಲಿ ಸಿಪಿ ಯೋಗೇಶ್ವರ ವಿರುದ್ಧದ ಆರೋಪ ಸಾಬೀತಾದರೆ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications