ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ: ಬಿ ವೈ ವಿಜಯೇಂದ್ರ ಏನಂದ್ರು?
ಬೆಂಗಳೂರು, ಫೆಬ್ರವರಿ 01:ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 'ಬಡಪಾಯಿ ಮಹಿಳೆ' ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಅತ್ಯಂತ ಅಪರೂಪದ ಬೆಳವಣಿಗೆಯಲ್ಲಿ ಸ್ವತಃ ರಾಷ್ಟ್ರಪತಿ ಭವನವೇ, 'ಇಂಥ ಹೇಳಿಕೆ ಕಳಪೆ ಅಭಿರುಚಿಯದ್ದು ಮತ್ತು ದುರದೃಷ್ಟಕರ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನೂ ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ ಗಾಂಧಿ ಹೇಳಿಕೆಗೆ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದು, ಸವಿಂಧನಾ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಹಾಗೂ ನೆಹರು ಮನೆತನ ಆದಿವಾಸಿ ಮೂಲದ ಶ್ರೀಮತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸ್ಥಾನ ರಾಷ್ಟ್ರಪತಿ ಹುದ್ದೆಯಲ್ಲಿರುವುದನ್ನು ಹೇಗೆ ಸಹಿಸಿಕೊಳ್ಳುತ್ತಾರೆ? ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ದ್ರೌಪದಿ ಮುರ್ಮು ಅವರನ್ನು ಕುರಿತು 'ಬಡಪಾಯಿ ಮಹಿಳೆ' ಎಂದು ಅಪಮಾನಿಸಿ ರಾಷ್ಟ್ರಪತಿ ಸ್ಥಾನದ ಘನತೆಗೆ ಧಕ್ಕೆ ತರುವ ಮೂಲಕ ಭಾರತವನ್ನೂ ಕೂಡ ಅಪಮಾನಿಸಿದ್ದಾರೆ.
ಸ್ವಾತಂತ್ರ್ಯಾ ನಂತರ ದೇಶದ ಅಧಿಕಾರವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದ್ದ ನೆಹರು ಮನೆತನ ಪ್ರಜಾತಂತ್ರ ವ್ಯವಸ್ಥೆಯಲ್ಲೂ ಸರ್ವಾಧಿಕಾರಿ ಆಡಳಿತ ಮೆರೆದ ಇತಿಹಾಸದ ಹಿನ್ನೆಲೆ ಹೊಂದಿದೆ. ಬಡವರು, ಹಿಂದುಳಿದವರು ಹಾಗೂ ಆದಿವಾಸಿ ಸಮುದಾಯಗಳನ್ನು ಕಾಂಗ್ರೆಸ್ ಪಕ್ಷ ತನ್ನ ಮತಬ್ಯಾಂಕ್ ಮಾಡಿಕೊಂಡಿತ್ತೇ ಹೊರತು ಈ ಸಮುದಾಯಗಳ ರಾಜಕೀಯ ಅಧಿಕಾರ ಹಾಗೂ ಶಿಕ್ಷಣವನ್ನು ನೀಡುವಲ್ಲಿ ವಂಚಿಸುತ್ತಲೇ ಬಂದಿದೆ.
ಶೋಷಿತ ಹಾಗೂ ಬುಡಕಟ್ಟು ಸಮುದಾಯಗಳು ಉನ್ನತ ಸ್ಥಾನ ಅಲಂಕರಿಸುವುದನ್ನು ಸಹಿಸದ ಮನಸ್ಥಿತಿ ಸೋನಿಯಾ ಅವರ ಹೇಳಿಕೆಯಲ್ಲಿ ಪ್ರತಿಫಲನಗೊಂಡಿದೆ. ಒಬ್ಬ ಮಹಿಳೆಯಾಗಿ ಅತ್ಯುನ್ನತ ಸ್ಥಾನದಲ್ಲಿರುವ ಮತ್ತೊಬ್ಬ ಮಹಿಳೆಯನ್ನು ಸೋನಿಯಾ ಅವರು ಹಿಯಾಳಿಸಿರುವುದು ಸ್ತ್ರೀ ಕುಲವನ್ನೂ ಸಹ ಅಪಮಾನಿಸಿದಂತಾಗಿದೆ.
ಸೋನಿಯಾ ಗಾಂಧಿ ಅವರ ಹೇಳಿಕೆ ಅವರ ಪುತ್ರಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಭಟ್ಟಂಗಿ ಕಾಂಗ್ರೆಸ್ಸಿಗರು ಸಮರ್ಥಿಸಲು ಹೊರಟಿರುವುದು ಅವರ ಭಂಡತನವನ್ನು ಸಾಕ್ಷೀಕರಿಸುತ್ತಿದೆ. ದೇಶದ ಪ್ರಥಮ ಪ್ರಜೆಯನ್ನು ಅವಮಾನಿಸಿರುವ ಸೋನಿಯಾ ಗಾಂಧಿ ಅವರು ಈ ಕೂಡಲೇ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದ ಜನತೆಯ ಮುಂದೆ ಕ್ಷಮೆ ಯಾಚಿಸಲಿ ಎಂದು ಒತ್ತಾಯಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications