ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಸೋನಿಯಾ ಕರ್ನಾಟಕ ಭೇಟಿ ಉದ್ದೇಶ ಹೇಳಿದ ಕಟೀಲ್!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 04; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳಲು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಸೋನಿಯಾ ಗಾಂಧಿ ಗುರುವಾರ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋನಿಯಾ ಗಾಂಧಿ ಕರ್ನಾಟಕ ಭೇಟಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Bharat Jodo Yatra in Karnataka : ಭಾರತ್‌ ಜೋಡೋ ಯಾತ್ರೆ ಉತ್ತಮ ಸ್ಪಂದನೆ; ಯಾವ ಶಕ್ತಿಯಿಂದಲೂ ನಿಲ್ಲಿಸಲಾಗಲ್ಲ: ರಾಹುಲ್ Bharat Jodo Yatra in Karnataka : ಭಾರತ್‌ ಜೋಡೋ ಯಾತ್ರೆ ಉತ್ತಮ ಸ್ಪಂದನೆ; ಯಾವ ಶಕ್ತಿಯಿಂದಲೂ ನಿಲ್ಲಿಸಲಾಗಲ್ಲ: ರಾಹುಲ್

'ಮಗನ ರಾಜಕೀಯ ಭವಿಷ್ಯಕ್ಕಾಗಿ ಎರಡು ದಿನದ ಮಟ್ಟಿಗೆ ಕರ್ನಾಟಕಕ್ಕೆ ಆಗಮಿಸಿರುವ ಸೋನಿಯಾ ಗಾಂಧಿಯವರಿಗೆ ಸಿಎಂ ಕುರ್ಚಿಯ ಭ್ರಮೆಯಲ್ಲಿ ಕಾದಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಒಂದುಗೂಡಿಸಲು ವರ್ಷ ಸಾಕಾಗುವುದಿಲ್ಲ ಎಂದು ಅನಿಸುತ್ತಿದೆ' ಎಂದು ಲೇವಡಿ ಮಾಡಿದ್ದಾರೆ.

Breaking; ಇದು ಯಾತ್ರೆಯೋ, ಸಿದ್ದು-ಡಿಕೆಶಿ ಜೋಡಿಸುವ ಜಾತ್ರೆಯೋ? Breaking; ಇದು ಯಾತ್ರೆಯೋ, ಸಿದ್ದು-ಡಿಕೆಶಿ ಜೋಡಿಸುವ ಜಾತ್ರೆಯೋ?

Sonia Gandhi Karnataka Visit Nalin Kumar Kateel Tweet

'ಮೊದಲು ಇವರಿಬ್ಬರನ್ನು ಜೋಡಿಸಿ ನಂತರ ಮುಂದುವರೆಯಲು ಅವರು ಮಗನಿಗೆ ಹೇಳಲಿದ್ದಾರೆ' ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್‌ನಲ್ಲಿ ಭವಿಷ್ಯ ನುಡಿದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ನಳಿನ್ ಕುಮಾರ್ ಕಟೀಲ್, 'ಭಾರತದ ಐಕ್ಯತೆಗಾಗಿ ಶ್ರಮಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಸರ್ವಸಮ್ಮತವಾಗಿ ಪ್ರಧಾನಿ ಸ್ಥಾನಕ್ಕೆ ನಾಮಾಂಕೀತರಾಗಿದ್ದರೂ ಅವರನ್ನು ಬದಿಗೆ ಸರಿಸಿ ಅಧಿಕಾರದ ಹಪಾಹಪಿಯಿಂದ ಪ್ರಧಾನಿಯಾದ ನೆಹರೂ ಅವರ ಮರಿಮಗ ಮೊದಲು ತಮ್ಮ ಕುಟುಂಬದ ತೋಡೋ ಇತಿಹಾಸ ಅರಿತು ಹೆಜ್ಜೆ ಹಾಕಿದರೆ ಒಂದೊಂದು ಹೆಜ್ಜೆಯಲ್ಲಿಯೂ ಇತಿಹಾಸದ ಪುಟ ತೆರೆದುಕೊಳ್ಳಲಿದೆ' ಎಂದು ಹೇಳಿದ್ದಾರೆ.

ಸೋಮವಾರ ಮೈಸೂರಿಗೆ ಆಗಮಿಸಿರುವ ಸೋನಿಯಾ ಗಾಂಧಿ ಕೊಡಗಿಗೆ ತೆರಳಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದ ಕಾರಣ ಕೊಡಗು ಭೇಟಿ ರದ್ದುಗೊಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ರಾಹುಲ್ ಗಾಂಧಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ರವಿಕುಮಾರ್ಭಾರತ್ ಜೋಡೋ ಯಾತ್ರೆಯ ರಾಹುಲ್ ಗಾಂಧಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ರವಿಕುಮಾರ್

ಪ್ರಸ್ತುತ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಬಿನಿ ಸಮೀಪದ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಭಾರತ್‌ ಜೋಡೋ ಯಾತ್ರೆ ಸೋಮವಾರ ಮಂಡ್ಯ ತಲುಪಿದೆ.

ಮಂಗಳವಾರ ಮತ್ತು ಬುಧವಾರ ಮೈಸೂರು ದಸರಾ ಹಿನ್ನಲೆಯಲ್ಲಿ ಭಾರತ್ ಜೋಡೋ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ 6ರಿಂದ ಯಾತ್ರೆ ಮುಂದುವರೆಯಲಿದೆ. ಗುರುವಾರದ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.

English summary
Karnataka BJP president Nalin Kumar Kateel tweet on AICC president Sonia Gandhi visit to Karnataka to took part in Bharat Jodo Yatra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X