Mysuru Dasara: ಮೈಸೂರು ದಸರಾ ಉದ್ಘಾಟನೆ ಮಾಡ್ತಾರಾ ಸೋನಿಯಾ ಗಾಂಧಿ?
ಮೈಸೂರು, ಆಗಸ್ಟ್ : ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಮೈಸೂರಿನಲ್ಲಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿದೆ. ಆದರೆ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡುವ ಗಣ್ಯರು ಯಾರು? ಎಂಬ ಕುತೂಹಲ ಮಾತ್ರ ಹೆಚ್ಚಾಗಿದ್ದು, ಅನೇಕ ಮಾಹಿತಿಗಳ ಪ್ರಕಾರ ಈ ಬಾರಿ ರಾಜಕೀಯ ಕ್ಷೇತ್ರದ ಗಣ್ಯರೊಬ್ಬರು ದಸರಾ ಉದ್ಘಾಟನೆ ಮಾಡುವ ನೀರಿಕ್ಷೆ ಇದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಹೌದು ಪ್ರತಿ ವರ್ಷವೂ ನಾಡ ಹಬ್ಬ ದಸರಾ ಸಮಯದಲ್ಲಿ ಕುತೂಹಲಕಾರಿಯಾಗಿ ಕಾಡುವ ವಿಚಾರ ಎಂದರೆ ಅದು ನಾಡ ಹಬ್ಬವನ್ನು ಉದ್ಘಾಟನೆ ಮಾಡುವವರು ಯಾರು ಎಂಬುದು. ಪ್ರತಿ ವರ್ಷವೂ ದಸರಾ ಉದ್ಘಾಟಕರ ಆಯ್ಕೆ ಮಾಡುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ. ಪ್ರತಿ ವರ್ಷವೂ ರಾಜ್ಯದ ಮುಖ್ಯಮಂತ್ರಿಗಳೆ ಆಯ್ಕೆ ಮಾಡಿ, ಘೋಷಣೆ ಮಾಡುತ್ತಾರೆ. ಮುಖ್ಯಮಂತ್ರಿಗಳು ಅವರ ವಿವೇಚನೆಗೆ ಯಾರು ಸರಿ ಎನಿಸುತ್ತಾರೆ ಅವರನ್ನ ಮುಖ್ಯಮಂತ್ರಿಗಳು ಆಯ್ಕೆ ಮಾಡುತ್ತಾರೆ. ಈ ವರ್ಷ ನಾಡ ಹಬ್ಬ ದಸರಾವನ್ನು ಉದ್ಘಾಟನೆಯನ್ನ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈ ಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿವೆ.

ದಸರಾ ಹಬ್ಬವನ್ನು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಾಗುತ್ತದೆ. ಹಲವು ವರ್ಷಗಳಿಂದ ಈ ಪದ್ದತಿ ರೂಡಿಯಲ್ಲಿ ಇದೆ. ಈ ಹಿಂದೆ ಕಲೆ ,ಸಾಹಿತ್ಯ ಮತ್ತು ಕಲಾವಿದರು ಹಾಗೂ ರಾಷ್ಟಪತಿಗಳು ಸೇರಿಂದತೆ ಅನೇಕ ಗಣ್ಯರು ಉದ್ಘಾಟನೆ ಮಾಡಿದ್ದಾರೆ. ಆದರೆ, ಇಷ್ಟು ವರ್ಷಗಳ ಕಾಲ ದಸರಾ ಉದ್ಘಾಟನೆಗೆ ರಾಜಕೀಯ ಕ್ಷೇತ್ರದವರನ್ನು ಹೊರಗೆ ಇಡಲಾಗಿತ್ತು. ಆದರೆ 2021 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜು ಬೊಮ್ಮೊಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನವನ್ನು ನೀಡಿದ್ರು. ಇದರೊಂದಿಗೆ ರಾಜಕೀಯ ಕ್ಷೇತ್ರದಿಂದ ಗಣ್ಯರು ಒಬ್ಬರು ಪ್ರಥಮ ಬಾರಿಗೆ ಮೈಸೂರು ದಸರಾವನ್ನು ಉದ್ಘಾಟನೆ ನಡೆಸಿದರು. ಹೀಗಾಗಿ ಈ ಬಾರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು ಮುನ್ನಲೆಗೆ ಬಂದಿದೆ.
ಸಿಎಂ ಕಚೇರಿ ಸ್ಪಷ್ಟನೆ
ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications