Mysuru Dasara: ಮೈಸೂರು ದಸರಾ ಉದ್ಘಾಟನೆ ಮಾಡ್ತಾರಾ ಸೋನಿಯಾ ಗಾಂಧಿ?
ಮೈಸೂರು, ಆಗಸ್ಟ್ : ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಮೈಸೂರಿನಲ್ಲಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿದೆ. ಆದರೆ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡುವ ಗಣ್ಯರು ಯಾರು? ಎಂಬ ಕುತೂಹಲ ಮಾತ್ರ ಹೆಚ್ಚಾಗಿದ್ದು, ಅನೇಕ ಮಾಹಿತಿಗಳ ಪ್ರಕಾರ ಈ ಬಾರಿ ರಾಜಕೀಯ ಕ್ಷೇತ್ರದ ಗಣ್ಯರೊಬ್ಬರು ದಸರಾ ಉದ್ಘಾಟನೆ ಮಾಡುವ ನೀರಿಕ್ಷೆ ಇದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಹೌದು ಪ್ರತಿ ವರ್ಷವೂ ನಾಡ ಹಬ್ಬ ದಸರಾ ಸಮಯದಲ್ಲಿ ಕುತೂಹಲಕಾರಿಯಾಗಿ ಕಾಡುವ ವಿಚಾರ ಎಂದರೆ ಅದು ನಾಡ ಹಬ್ಬವನ್ನು ಉದ್ಘಾಟನೆ ಮಾಡುವವರು ಯಾರು ಎಂಬುದು. ಪ್ರತಿ ವರ್ಷವೂ ದಸರಾ ಉದ್ಘಾಟಕರ ಆಯ್ಕೆ ಮಾಡುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ. ಪ್ರತಿ ವರ್ಷವೂ ರಾಜ್ಯದ ಮುಖ್ಯಮಂತ್ರಿಗಳೆ ಆಯ್ಕೆ ಮಾಡಿ, ಘೋಷಣೆ ಮಾಡುತ್ತಾರೆ. ಮುಖ್ಯಮಂತ್ರಿಗಳು ಅವರ ವಿವೇಚನೆಗೆ ಯಾರು ಸರಿ ಎನಿಸುತ್ತಾರೆ ಅವರನ್ನ ಮುಖ್ಯಮಂತ್ರಿಗಳು ಆಯ್ಕೆ ಮಾಡುತ್ತಾರೆ. ಈ ವರ್ಷ ನಾಡ ಹಬ್ಬ ದಸರಾವನ್ನು ಉದ್ಘಾಟನೆಯನ್ನ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈ ಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿವೆ.

ದಸರಾ ಹಬ್ಬವನ್ನು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಾಗುತ್ತದೆ. ಹಲವು ವರ್ಷಗಳಿಂದ ಈ ಪದ್ದತಿ ರೂಡಿಯಲ್ಲಿ ಇದೆ. ಈ ಹಿಂದೆ ಕಲೆ ,ಸಾಹಿತ್ಯ ಮತ್ತು ಕಲಾವಿದರು ಹಾಗೂ ರಾಷ್ಟಪತಿಗಳು ಸೇರಿಂದತೆ ಅನೇಕ ಗಣ್ಯರು ಉದ್ಘಾಟನೆ ಮಾಡಿದ್ದಾರೆ. ಆದರೆ, ಇಷ್ಟು ವರ್ಷಗಳ ಕಾಲ ದಸರಾ ಉದ್ಘಾಟನೆಗೆ ರಾಜಕೀಯ ಕ್ಷೇತ್ರದವರನ್ನು ಹೊರಗೆ ಇಡಲಾಗಿತ್ತು. ಆದರೆ 2021 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜು ಬೊಮ್ಮೊಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನವನ್ನು ನೀಡಿದ್ರು. ಇದರೊಂದಿಗೆ ರಾಜಕೀಯ ಕ್ಷೇತ್ರದಿಂದ ಗಣ್ಯರು ಒಬ್ಬರು ಪ್ರಥಮ ಬಾರಿಗೆ ಮೈಸೂರು ದಸರಾವನ್ನು ಉದ್ಘಾಟನೆ ನಡೆಸಿದರು. ಹೀಗಾಗಿ ಈ ಬಾರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು ಮುನ್ನಲೆಗೆ ಬಂದಿದೆ.
ಸಿಎಂ ಕಚೇರಿ ಸ್ಪಷ್ಟನೆ
ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ.
-
ಮಧ್ಯಪ್ರಾಚ್ಯ ಸಂಘರ್ಷ: ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ -
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ












Click it and Unblock the Notifications