ಗೋವಾ-ಕರ್ನಾಟಕ ನಡುವೆ ಸಂಚರಿಸಲಿವೆ ಹೆಚ್ಚುವರಿ ಬಸ್
ಬೆಂಗಳೂರು, ಜ. 20 : ಗೋವಾಕ್ಕೆ ಪ್ರಯಾಣಿಸುವ ಜನರಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗೋವಾಕ್ಕೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಕಲ್ಪಿಸುತ್ತಿದೆ. 28 ಹೊಸ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಕೆಎಸ್ಆರ್ಟಿಸಿ ಮತ್ತು ಗೋವಾದ ಕದಂಬ ಸಾರಿಗೆ ಸಂಸ್ಥೆಗಳು ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡಿವೆ. ಈ ಕುರಿತ ಒಪ್ಪಂದಕ್ಕೆ ಶೀಘ್ರದಲ್ಲೇ ಸಹಿ ಮಾಡಲಿವೆ. ಪ್ರಸ್ತುತ 2007ರ ಒಪ್ಪಂದದಂತೆ ಉಭಯ ರಾಜ್ಯಗಳ ನಡುವೆ ಬಸ್ ಸಂಚರಿಸುತ್ತಿವೆ.

ಉಭಯ ರಾಜ್ಯಗಳ ನಡುವೆ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದೆ ಇದನ್ನು ಗಮನದಲ್ಲಿಟ್ಟುಕೊಂಡು ಉಭಯ ರಾಜ್ಯಗಳು ಹೊಸ ಒಪ್ಪಂದಕ್ಕೆ ಸಹಿ ಹಾಕಿವೆ. ನೂತನ ಒಪ್ಪಂದದಂತೆ ಕದಂಬ ಸಾರಿಗೆ ಸಂಸ್ಥೆಯೂ ಕರ್ನಾಟಕದಲ್ಲಿ ತನ್ನ ಸೇವೆಯನ್ನು ಹೆಚ್ಚಿಸಲಿದೆ. [ಗಣರಾಜ್ಯೋತ್ಸವಕ್ಕೆ ಹೆಚ್ಚುವರಿ ಬಸ್]
ಕೆಎಸ್ಆರ್ಟಿಸಿ ವಾಯುವ್ಯ ಕರ್ನಾಟಕ ಸಾರಿಗೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಗೋವಾಕ್ಕೆ ಸಂಪರ್ಕ ಕಲ್ಪಿಸಲು ಬಳಸಿಕೊಳ್ಳಲಿದೆ. 28 ಹೊಸ ಮಾರ್ಗ ಮತ್ತು ಈಗಿರುವ ಮಾರ್ಗದಲ್ಲಿಯೇ 59 ಹೊಸ ಬಸ್ಸುಗಳನ್ನು ಓಡಿಸಲಿದೆ.
ಯಾವ ಸ್ಥಳಗಳು : ಪಣಜಿ, ವಾಸ್ಕೋ, ಮಡಗಾಂವ್ ಮುಂತಾದ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ಸುಗಳು ಇನ್ನುಮುಂದೆ ಸಂಚರಿಸಲಿವೆ. ಕದಂಬ ಸಾರಿಗೆ ಸಂಸ್ಥೆಯ ಕರ್ನಾಟಕದ 28 ಹೊ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ಆರಂಭಿಸಲಿದ್ದು, ಇವುಗಳಲ್ಲಿ ಮೈಸೂರು, ಬೆಂಗಳೂರು, ಮುರುಡೇಶ್ವರ, ಗೋಕರ್ಣ, ಬೆಳಗಾವಿ ಮುಂತಾದ ಪ್ರದೇಶಗಳು ಸೇರಿವೆ.
ಉಭಯ ರಾಜ್ಯಗಳ ನಡುವೆ ಹಬ್ಬ ಮತ್ತು ರಜೆಯ ದಿನಗಳಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸಲು ಎರಡೂ ರಾಜ್ಯಗಳು ಒಪ್ಪಿಗೆ ನೀಡಿವೆ. ಈ ಹೊಸ ಒಪ್ಪಂದ ಪತ್ರಕ್ಕೆ ಎರಡೂ ರಾಜ್ಯಗಳ ಸಹಿ ಬಿದ್ದ ನಂತರ ಬಸ್ ಸಂಚಾರ ಆರಂಭವಾಗಲಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications